Webdunia - Bharat's app for daily news and videos

Install App

ಸೋಲಾರ್ ಪ್ರಕರಣ: ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪ..?

Webdunia
ಗುರುವಾರ, 12 ಅಕ್ಟೋಬರ್ 2017 (07:50 IST)
ಕೇರಳ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಸಾಧ್ಯತೆಯಿದೆ. ಬಹುಕೋಟಿ ಸೋಲಾರ್ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲು ಕೇರಳ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಪತ್ರದಲ್ಲಿ ಯಾರ ಹೆಸರನ್ನು ಬರೆದಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಸೋಲಾರ್ ತನಿಖಾ ಆಯೋಗದ ವರದಿ ಬಂದಿದ್ದು, ಆರೋಪಿ ಸರಿತಾ ಪತ್ರದಲ್ಲಿ ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬಹುದು ಎಂದು ಹೇಳಿದೆ. ಲೈಂಗಿಕ ಬಯಕೆ ಈಡೇರಿಸುವಂತೆ ಬೇಡಿಕೆ ಇಡುವುದು ಭ್ರಷ್ಟಾಚಾರದ ಭಾಗವೆಂದು ಪರಿಗಣಿಸಲಾಗಿದೆ. ಈ ವರದಿಯನ್ನೇ ಆಧರಿಸಿ ಕಾಂಗ್ರೆಸ್‍ಗೆ ಶಾಕ್ ನೀಡಲು ಕೇರಳದ ಎಡಪಕ್ಷಗಳ ಸರ್ಕಾರ ಮುಂದಾಗಿದೆ.

ಮಾಧ್ಯಮಗಳಿಗೆ ಸೋರಿಕೆಯಾಗಿರುವ ಮಾಹಿತಿ ಪ್ರಕಾರ ಸರಿತಾ ನಾಯರ್ ಬರೆದಿರುವ ಪತ್ರದಲ್ಲಿ, ಮಾಜಿ ಸಿಎಂ ಉಮ್ಮಾನ್ ಚಾಂಡಿ, ಸಂಸದ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಹೈಬಿ ಈಡನ್, ಅರ್ಯಾಡನ್ ಮೊಹಮ್ಮದ್, ಅಡೂರ್ ಪ್ರಕಾಶ್ ಸೇರಿದಂತೆ ಹಲವರ ಹೆಸರಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ಮುಂದಿನ ಸುದ್ದಿ