Select Your Language

Notifications

webdunia
webdunia
webdunia
webdunia

ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ !

ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ !
ನವದೆಹಲಿ , ಮಂಗಳವಾರ, 18 ಏಪ್ರಿಲ್ 2023 (12:50 IST)
ನವದೆಹಲಿ : ಬಟಿಂಡಾದಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರು ಸೈನಿಕರ ಹತ್ಯೆಯ ಪ್ರಕರಣದಲ್ಲಿ ಓರ್ವ ಯೋಧನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ
 
ಬಟಿಂಡಾ ಸೇನಾ ನೆಲೆಯಲ್ಲಿ ಯೋಧ ಮೋಹನ್ ದೇಸಾಯಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಚಾರಣೆ ವೇಳೆ ಆರೋಪಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ವೈಯಕ್ತಿಕ ವಿಚಾರಕ್ಕಾಗಿ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಿದ್ದಾನೆ. 

ಗುಂಡಿನ ದಾಳಿಗೆ ಸಂಬಂಧಿಸಿದಂತೆ ಘಟನೆಯ ಸಾಕ್ಷಿ ಮೇಜರ್ ಅಶುತೋಷ್ ಶುಕ್ಲಾ ಅವರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆಯ ಸಂಬಂಧ ನಾಲ್ವರು ಯೋಧರನ್ನು ಭಾನುವಾರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ದಿನ, ಕುರ್ತಾ-ಪೈಜಾಮಾದಲ್ಲಿದ್ದ ಕೆಲವು ಅಪರಿಚಿತ ಮುಸುಕುಧಾರಿಗಳು ಕಾಣಿಸಿಕೊಂಡಿದ್ದರು. ಒಬ್ಬ ವ್ಯಕ್ತಿ ಐಎನ್ಎಸ್ಎಎಸ್ ಅಸಾಲ್ಟ್ ರೈಫಲ್ ಹೊಂದಿದ್ದು, ಮತ್ತೊಬ್ಬ ಕೊಡಲಿಯನ್ನು ಹಿಡಿದುಕೊಂಡಿದ್ದ. ಅವರು ಸೇನಾ ಠಾಣೆಯ ಸಮೀಪವಿರುವ ಕಾಡಿನ ಕಡೆಗೆ ಓಡಿಹೋದರು ಎಂಬ ಮಾಹಿತಿ ಎಫ್ಐಆರ್ ನಲ್ಲಿ ದಾಖಲಿಸಲಾಗಿತ್ತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಸ್ಫೋಟಗೊಳ್ಳದ ಬಾಂಬ್ 24 ವರ್ಷದ ಬಳಿಕ ಬ್ಲ್ಯಾಸ್ಟ್