Webdunia - Bharat's app for daily news and videos

Install App

ಯುವತಿಗೆ ಕಿರುಕುಳ ವಿವಾದ: ಹರಿಯಾಣಾ ಬಿಜೆಪಿ ಅಧ್ಯಕ್ಷನ ರಾಜೀನಾಮೆ

Webdunia
ಸೋಮವಾರ, 7 ಆಗಸ್ಟ್ 2017 (15:52 IST)
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ರನ ಕೃತ್ಯದಿಂದಾಗಿ ತಂದೆ ಹರಿಯಾಣಾದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ ಬರಾಲಾ ರಾಜೀನಾಮೆ ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಆದರೆ, ರಾಜಕೀಯ ಒತ್ತಡದಿಂದಾಗಿ ಬಂಧನವಾದ ಒಂದು ಗಂಟೆಯಲ್ಲಿಯೇ ಜಾಮೀನು ನೀಡಲಾಗಿತ್ತು.
 
ವಿಪಕ್ಷವಾದ ಕಾಂಗ್ರೆಸ್ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ ಸರಕಾರದ ಒತ್ತಡದಿಂದಾಗಿ ಪೊಲೀಸರು ಆರೋಪಿ ವಿಕಾಸ್‌ಗೆ ಜಾಮೀನು ನೀಡಿದ್ದಾರೆ ಎಂದು ಹೇಳಿಕೆ ನೀಡಿತ್ತು.
 
ಹಲವು ಮಹಿಳಾ ಸಂಘಟನೆಗಳು, ಬಿಜೆಪಿಯ ಸಂಸದರೇ ರಾಜ್ಯಾಧ್ಯಕ್ಷ ,ಸುಭಾಷ್ ಬರಾಲಾ ವಿರುದ್ಧ ಧ್ವನಿಗೂಡಿಸಿದ್ದರಿಂದ ಅನಿವಾರ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ