Webdunia - Bharat's app for daily news and videos

Install App

ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಮಗ!

Webdunia
ಸೋಮವಾರ, 7 ಮಾರ್ಚ್ 2022 (08:29 IST)
ಲಕ್ನೋ : ಆಸ್ತಿ ವಿಚಾರಕ್ಕೆ ವೃದ್ಧ ತಂದೆಯ ಕತ್ತು ಹಿಸುಕಿ ಮಗನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಎಂದು ಗುರುತಿಸಲಾಗಿದೆ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ-ಮಗ ಇಬ್ಬರನ್ನು ಮನೆಯಲ್ಲಿ ಬಿಟ್ಟು ತಂದೆಯ ಮನೆಗೆ ಹೋಗಿದ್ದರು. ತಂದೆಯೊಂದಿಗೆ ಏಕಾಂಗಿಯಾಗಿದ್ದ ವಿನೀತ್ ಅಮೃತ್ ಲಾಲ್ಗೆ ಮನೆ ಮಾರಾಟ ಮಾಡುವಂತೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಇದಕ್ಕೆ ಅಮೃತ್ ಲಾಲ್ ಅವರು ನಿರಾಕರಿಸಿ ವಿನೀತ್ಗೆ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ವಿನೀತ್ ತಂದೆಯ ಕತ್ತನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕಂಬಳಿಯಲ್ಲಿ ಸುತ್ತಿ ಸುಟ್ಟು ಹಾಕಿದ್ದಾನೆ.

ಈ ಘಟನೆ ಕುರಿತಂತೆ ತನಿಖೆ ವೇಳೆ ಆಶಾದೇವಿ ಅವರು, ವಾಸಿಸುತ್ತಿದ್ದ ಮನೆಯನ್ನು ಮಾರಾಟ ಮಾಡಲು ವಿನೀತ್ ಬಯಸಿದ್ದ. ವಿನೀತ್ ಈಗಾಗಲೇ ತಮ್ಮ 100 ಚದರ ಮೀಟರ್ನಷ್ಟು ನಿವೇಶನವನ್ನು ಮಾರಾಟ ಮಾಡಿದ್ದಾನೆ. ಇದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗಿತ್ತು ಮತ್ತು ವಿನೀತ್ ಆಗಾಗ್ಗೆ ಮನೆಯನ್ನು ಮಾರಾಟ ಮಾಡಿ ತನಗೆ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ.

ಅಲ್ಲದೇ ನಾಲ್ಕು ವರ್ಷಗಳ ಹಿಂದೆ ಕಿರಿಯ ಮಗ ನೆಹನಾ ಆತ್ಮಹತ್ಯೆ ಮಾಡಿಕೊಂಡಿದ್ದು ಸಹ ಕುಟುಂಬದಲ್ಲಿ ಕಲಹ ಉಂಟಾಗಲು ಕಾರಣವಾಗಿತ್ತು ಎಂದು ಪೊಲೀರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments