Select Your Language

Notifications

webdunia
webdunia
webdunia
webdunia

ಜನರು, ವಿದ್ಯಾರ್ಥಿಗಳ ಹಕ್ಕು ಕಸಿದುಕೊಳ್ಳುವ ಕೆಲಸ ಬಿಜೆಪಿ ಮಾಡುತ್ತಿದೆ- ಸೋನಿಯಾ ಗಾಂಧಿ ಆರೋಪ

ಜನರು, ವಿದ್ಯಾರ್ಥಿಗಳ ಹಕ್ಕು ಕಸಿದುಕೊಳ್ಳುವ ಕೆಲಸ ಬಿಜೆಪಿ ಮಾಡುತ್ತಿದೆ- ಸೋನಿಯಾ ಗಾಂಧಿ ಆರೋಪ
ನವದೆಹಲಿ , ಶನಿವಾರ, 21 ಡಿಸೆಂಬರ್ 2019 (08:15 IST)
ನವದೆಹಲಿ : ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ದಮನಕಾರಿ ಧೋರಣೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ದೇಶದುದ್ದಕ್ಕೂ ಜನರು, ವಿದ್ಯಾರ್ಥಿಗಳ ಹಕ್ಕು ಕಸಿದುಕೊಳ್ಳುವ ಕೆಲಸ ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಕಿಡಿಕಾರಿದ್ದಾರೆ.


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ತಪ್ಪು ನೀತಿ ಪ್ರಶ್ನಿಸುವ ಹಕ್ಕಿದೆ. ಜನರ ಭಾವನೆ, ಸಲಹೆಗಳನ್ನು ಕೇಳುವುದು ಸರ್ಕಾರದ ಕರ್ತವ್ಯ. ಜನರ ಧ್ವನಿಗಳನ್ನು ಹತ್ತಿಕ್ಕುವ ಕೆಲಸ ಬಿಜೆಪಿ ಸರ್ಕಾರ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸದ್ಯಕ್ಕೆ ಎನ್ ಆರ್ ಸಿ ಜಾರಿ ಮಾಡಲ್ಲ ಎಂದ ಕೇಂದ್ರ ಸರ್ಕಾರ