ಅಮ್ಮನಾಗಿ ಮಕ್ಕಳನ್ನು ತುಂಬಾ ದಿನದ ನಂತರ ಭೇಟಿಯಾದಂತಾಗಿದೆ ಎಂದು ಸೋನಿಯಾ ಹೇಳಿದ್ದು ಯಾರಿಗೆ?

Webdunia
ಶನಿವಾರ, 24 ನವೆಂಬರ್ 2018 (09:31 IST)
ಹೈದರಾಬಾದ್: ಯುಪಿಎ ಸರ್ಕಾರದ ಅವಧಿಯಲ್ಲಿ ಉದಯವಾದ ತೆಲಂಗಾಣ ರಾಜ್ಯಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.


ತೆಲಂಗಾಣದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ‘ಒಬ್ಬ ಅಮ್ಮನಾಗಿ ಅದೆಷ್ಟೋ ದಿನಗಳ ನಂತರ ಮಕ್ಕಳನ್ನು ನೋಡಿದ ಅನುಭವ ನನಗಾಗುತ್ತಿದೆ. ತೆಲಂಗಾಣ ರಾಜ್ಯ ನಿರ್ಮಾಣವಾಗುವಾಗ ಎಷ್ಟು ಕಷ್ಟ ಅನುಭವಿಸಿದ್ದೆ ಎಂದು ನನಗೆ ಗೊತ್ತು. ಆದರೆ ಟಿಆರ್ ಎಸ್ ಪಕ್ಷ ಇಲ್ಲಿನ ಜನರ ನಿರೀಕ್ಷೆಗಳು, ಕನಸುಗಳನ್ನು ನುಚ್ಚುನೂರು ಮಾಡಿದೆ. ಹೀಗಾಗಿ ಟಿಆರ್ ಎಸ್ ಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಿ’ ಎಂದು ಸೋನಿಯಾ ಕರೆ ಕೊಟ್ಟಿದ್ದಾರೆ.

‘ತೆಲಂಗಾಣ ಮತ್ತು ಆಂಧ್ರವನ್ನು ವಿಭಜಿಸಿ ಪ್ರತ್ಯೇಕ ರಾಜ್ಯವಾಗಿ ಘೋಷಿಸುವ ನಿರ್ಧಾರ ಕೈಗೊಳ್ಳಲು ನನಗೆ ತುಂಬಾ ಕಷ್ಟವಾಯಿತು. ಆದರೆ ನನ್ನ ಸಹೋದ್ಯೋಗಿಗಳು, ಡಾ. ಮನಮೋಹನ್ ಸಿಂಗ್, ರಾಹುಲ್ ಗಾಂಧಿ ನನಗೆ ಬೆಂಬಲವಾಗಿದ್ದರು. ಇಲ್ಲಿನ ಜನರು ಪ್ರತ್ಯೇಕ ರಾಜ್ಯಕ್ಕಾಗಿ ಮಾಡುತ್ತಿರುವ ಹೋರಾಟದ ತೀವ್ರತೆ ನೋಡಿ ಆ ನಿರ್ಧಾರಕ್ಕೆ ಒಪ್ಪಿಗೆ ಕೊಡಬೇಕಾಯಿತು’ ಎಂದು ಸೋನಿಯಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments