Webdunia - Bharat's app for daily news and videos

Install App

ಭಾರತ ರತ್ನ ಕೊಟ್ಟರೆ ನನಗೇನೂ ಸಮಸ್ಯೆಯಿಲ್ಲ: ಸೋನಿಯಾ ಗಾಂಧಿ

Krishnaveni K
ಶುಕ್ರವಾರ, 9 ಫೆಬ್ರವರಿ 2024 (16:27 IST)
ನವದೆಹಲಿ: ಪ್ರಧಾನಿ ಮೋದಿ ಇಂದು ಮತ್ತೆ ಮೂವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಭಾರತದ ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಮತ್ತು ವಿಜ್ಞಾನಿ ಎಂಎಸ್‍ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಧಾನ ಮಾಡಲಾಗುತ್ತದೆ. ಇದಕ್ಕೆ ಮೊದಲು ಇತ್ತೀಚೆಗಷ್ಟೇ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಧಾನ ಮಾಡಲಾಗಿತ್ತು. ಈ ಮೂಲಕ ಒಂದೇ ತಿಂಗಳ ಅವಧಿಯಲ್ಲಿ ಒಟ್ಟು ಐವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಶ್ತಿಯಾದ ಭಾರತ ರತ್ನ ಪ್ರಶಸ್ತಿ ಗೌರವ ಸಲ್ಲಿಸಲಾಗುತ್ತಿದೆ.

ಸೋನಿಯಾ ಗಾಂಧಿ ಪ್ರತಿಕ್ರಿಯೆ
ಇದೀಗ ಭಾರತ ರತ್ನ ಘೋಷಣೆ ಮಾಡಿದವರ ಪೈಕಿ ಪಿವಿ ನರಸಿಂಹ ರಾವ್ ನೆಹರೂ ಕುಟುಂಬಕ್ಕೆ ಸೇರದ ಓರ್ವ ಪೂರ್ಣ ಪ್ರಮಾಣದಲ್ಲಿ ದೇಶವನ್ನಾಳಿದ ಪ್ರಧಾನಿಯಾಗಿದ್ದರು. ಇದೀಗ ಕೇಂದ್ರ ಸರ್ಕಾರ ಭಾರತ ರತ್ನ ಘೋಷಣೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಸೋನಿಯಾ ಗಾಂಧಿ ‘ನಾನು ಅವರನ್ನು ಸ್ವಾಗತಿಸುತ್ತೇನೆ. ಯಾಕಾಗಬಾರದು?’ ಎಂದಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರ ಘೋಷಿಸಿರುವ ಭಾರತ ರತ್ನ ಪ್ರಶಸ್ತಿಗೆ ತಮ್ಮ ತಕರಾರಿಲ್ಲ ಎಂದಿದ್ದಾರೆ.

ಸಂಸತ್ ಆವರಣದಲ್ಲಿ ತಮ್ಮನ್ನು ಪ್ರಶ್ನಿಸಿದ ಸುದ್ದಿಗಾರರಿಗೆ ಸೋನಿಯಾ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಆದರೆ ಇದಕ್ಕೆ ಹೆಚ್ಚಾಗಿ ಯಾವುದೇ ಕಾಮೆಂಟ್ ಮಾಡಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments