ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರ ಪಕ್ಷ ಕಾಂಗ್ರೆಸ್ ಚೆನ್ನೈನಲ್ಲಿ ಮೇ 5 ರಂದು ಬೃಹತ್ ಮೆರವಣಿಗೆಯನ್ನು ಆಯೋಜಿಸಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಡಿಎಂಕೆ ಅಧ್ಯಕ್ಷ ಎಮ್. ಕರುಣಾನಿಧಿ ಈ ಸಭೆಯಲ್ಲಿ ಭಾಗವಹಿಸಲಿದ್ದು ತಮ್ಮ ಅಭ್ಯರ್ಥಿಗಳಿಗಾಗಿ ಮತಯಾಚನೆ ಮಾಡಲಿದ್ದಾರೆ.
ನಗರದ ಐಲೆಂಡ್ ಗ್ರೌಂಡ್ಸ್ನಲ್ಲಿ ಈ ಪ್ರಚಾರ ಮೆರವಣಿಗೆಯನ್ನು ಕೈಗೊಳ್ಳಲಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇವಿಕೆಎಸ್ ಎಳಂಗೋವನ್ ತಿಳಿಸಿದ್ದಾರೆ (ಎಐಡಿಎಂಕೆ ನಾಯಕಿ, ಮುಖ್ಯಮಂತ್ರಿ ಜೆ. ಜಯಲಲಿತಾ ಸಹ ಇದೇ ಸ್ಥಳದಿಂದ ಪ್ರಚಾರವನ್ನು ಆರಂಭಿಸಿದ್ದರು)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಅವರು ಸಹ ತಮಿಳುನಾಡಿಗೆ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದು ಡಿಎಂಕೆ ಖಜಾಂಚಿ ಎಂ.ಕೆ ಸ್ಟಾಲಿನ್ ಒಡಗೂಡಿ ಮತಯಾಚನೆ ಮಾಡಲಿದ್ದಾರೆ. ದಿನಾಂಕ ಮತ್ತು ಸಮಯವನ್ನು ಸದಸ್ಯದಲ್ಲಿಯೇ ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.