Select Your Language

Notifications

webdunia
webdunia
webdunia
webdunia

ಮೇ 6 ರಂದು ಸೋನಿಯಾ ರಾಹುಲ್ ನೇತೃತ್ವದಲ್ಲಿ ಸಂಸತ್ತಿಗೆ ಮುತ್ತಿಗೆ: ಕಾಂಗ್ರೆಸ್

ಮೇ 6 ರಂದು ಸೋನಿಯಾ ರಾಹುಲ್ ನೇತೃತ್ವದಲ್ಲಿ ಸಂಸತ್ತಿಗೆ ಮುತ್ತಿಗೆ: ಕಾಂಗ್ರೆಸ್
ನವದೆಹಲಿ , ಶನಿವಾರ, 30 ಏಪ್ರಿಲ್ 2016 (18:49 IST)
ಉತ್ತರಾಖಂಡ್ ಸರಕಾರ ಉರುಳಿಸುವಿಕೆ, ಬರಗಾಲ ಸೇರಿದಂತೆ ಹಲವು ವಿಷಯಗಳಲ್ಲಿ ಪ್ರಧಾನಿ ಮೋದಿ ಸರಕಾರದ ವೈಫಲ್ಯದ ಬಗ್ಗೆ ಗಮನ ಸೆಳೆಯಲು ಕಾಂಗ್ರೆಸ್ ಪಕ್ಷ ಮೇ 6 ರಂದು ಸಂಸತ್ತಿಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ. 
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ನಂತರ ಸಂಸತ್ತಿಗೆ ಮುತ್ತಿಗೆ ಹಾಕಲು ತೆರಳಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಕಳೆದ ವರ್ಷ ರೈತರಿಗೆ ಮಾರಕವಾಗಿದ್ದ ಭೂ ಸ್ವಾಧೀನ ಮಸೂದೆ ವಿರೋಧಿ ಹೋರಾಟವನ್ನು ಕಾಂಗ್ರೆಸ್ ಪಕ್ಷ ರಾಮಲೀಲಾ ಮೈದಾನದಲ್ಲಿ ಆಯೋಜಿಸಿ ಯಶಸ್ಸನ್ನು ಕಂಡಿತ್ತು.
 
ಪ್ರಜಾಪ್ರಭುತ್ವವನ್ನು ಉಳಿಸಿ ಅಂಗವಾಗಿ ಸಂಸತ್ತಿಗೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಖಂಡ್ ಅಗ್ನಿ ದುರಂತ: 1500 ಗ್ರಾಮಗಳ ಗ್ರಾಮಸ್ಥರು ಆತಂಕದಲ್ಲಿ