ಸೋನಿಯಾ ಗಾಂಧಿ ಕಾಂಗ್ರೆಸ್‌ ಪಕ್ಷದಲ್ಲಿ ಏಕತೆಯ ರೂವಾರಿಯಾಗಿದ್ದಾರೆ: ವೆಂಕಯ್ಯಾನಾಯ್ಡು

Webdunia
ಮಂಗಳವಾರ, 24 ಮೇ 2016 (11:13 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ರಾಷ್ಟ್ರಾಧ್ಯಕ್ಷರಾಗಿ ಬಡ್ತಿ ನೀಡಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಎಂ.ವೆಂಕಯ್ಯನಾಯ್ಡು, ಸೋನಿಯಾ ಗಾಂಧಿಯವರಿಗೆ ಪಕ್ಷದಲ್ಲಿ ಒಗ್ಗಟ್ಟು ತರುವ ಶಕ್ತಿಯಿದೆ. ಇಲ್ಲವಾದಲ್ಲಿ ಪಕ್ಷ ಒಡೆದು ಛಿದ್ರವಾಗಲಿದೆ ಎಂದು ಹೇಳಿದ್ದಾರೆ.
 
ನಾಯಕತ್ವ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರವಾಗಿದೆ. ಸೋನಿಯ ಗಾಂಧಿಯವರ ಬಳಿ ಕಾಂಗ್ರೆಸ್ ನಾಯಕರಲ್ಲಿ ಏಕತೆಯನ್ನು ತರುವ ಶಕ್ತಿಯಿದೆ. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ ಎದುರಾಗಲಿದೆ ಎಂದು ನನ್ನ ವ್ಯಯಕ್ತಿಕ ಅನಿಸಿಕೆಯಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ವಂಶಪರಂಪರೆ ಮಾರಕ. ಆದರೆ, ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ಅದೊಂದು ಸಮಸ್ಯೆಯಾಗಿಲ್ಲ. ಆದರೆ, ವಾಸ್ತವತೆಯನ್ನು ಒಪ್ಪಿಕೊಳ್ಳಬೇಕಾಗಿದೆ. ಸೋನಿಯಾ ಕಾಂಗ್ರೆಸ್ ಪಕ್ಷದಲ್ಲಿ ಏಕತೆಯ ಸಂಕೇತವಾಗಿದ್ದಾರೆ ಎಂದರು.
 
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಸೋಲಿನ ನಂತರ ಆತ್ಮವಿಮರ್ಶೆ ಮಾಡಿಕೊಳ್ಳಲಾಗುವುದು ಎನ್ನುವ ಸೋನಿಯಾ ಗಾಂಧಿಯವರ ಹೇಳಿಕೆ ಅವರ ಪಕ್ಷಕ್ಕೆ ಸಂಬಂಧಿಸಿದ ಸಂಗತಿಯಾಗಿದೆ ಎಂದು ಬಿಜೆಪಿ ಮುಖಂಡ ಎಂ.ವೆಂಕಯ್ಯನಾಯ್ಡು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments