Webdunia - Bharat's app for daily news and videos

Install App

'ದೇಶ್ ಕಾ ಮೆಂಟರ್ಸ್'ನ ಬ್ರ್ಯಾಂಡ್ ರಾಯಭಾರಿಯಾಗಿ ಸೋನು ಸೋದ್: ಕೇಜ್ರಿವಾಲ್

Webdunia
ಶುಕ್ರವಾರ, 27 ಆಗಸ್ಟ್ 2021 (13:35 IST)
ನವದೆಹಲಿ: 'ದೆಹಲಿಯ ಎಎಪಿ ಸರ್ಕಾರದ 'ದೇಶ್ ಕಾ ಮೆಂಟರ್ಸ್' ಕಾರ್ಯಕ್ರಮದ ಬ್ರ್ಯಾಂಡ್ ರಾಯಭಾರಿಯನ್ನಾಗಿ ನಟ ಸೋನು ಸೋದ್ ಅವರನ್ನು ನೇಮಿಸಲಾಗಿದೆ' ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿ ಜೀವನವನ್ನು ಆರಿಸುವಲ್ಲಿ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
'ಸರ್ಕಾರಿ ಶಾಲೆಯ ಬಹುತೇಕ ವಿದ್ಯಾರ್ಥಿಗಳು ತೀರಾ ಬಡ ಕುಟುಂಬಗಳಿಂದ ಬಂದವರಾಗಿರುತ್ತಾರೆ. ಅವರಿಗೆ ಮಾರ್ಗದರ್ಶನ ನೀಡಲು ಕೆಲವೇ ಜನರಿರುತ್ತಾರೆ. ಹಾಗಾಗಿ ಈ ಮಕ್ಕಳಿಗೆ ಮಾರ್ಗದರ್ಶಕರಾಗುವಂತೆ ನಾವು ವಿದ್ಯಾವಂತರಲ್ಲಿ ಮನವಿ ಮಾಡುತ್ತೇವೆ. ಈ ಕಾರ್ಯಕ್ರಮದ ಬ್ರ್ಯಾಂಡ್ ರಾಯಭಾರಿಯನ್ನಾಗಿ ಸೋನು ಸೂದ್ ಕಾರ್ಯ ನಿರ್ವಹಿಸುವರು' ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸೋನು ಸೂದ್ ಹಾಗೂ ಕೇಜ್ರಿವಾಲ್ ಅವರು, 'ನಾವು ಕೇವಲ ಕಾರ್ಯಕ್ರಮದ ಕುರಿತಾಗಿ ಮಾತುಕತೆ ನಡೆಸಿದೆವು. ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಚರ್ಚಿಸಿಲ್ಲ' ಎಂದು ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments