Webdunia - Bharat's app for daily news and videos

Install App

10 ಕೋಟಿ ವೆಚ್ಚದಲ್ಲಿ ಪ್ರಧಾನಿ ಮೋದಿ ದೇವಾಲಯ ನಿರ್ಮಾಣ

Webdunia
ಮಂಗಳವಾರ, 3 ಅಕ್ಟೋಬರ್ 2017 (13:34 IST)
ಮೀರತ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮೋದಿ ಹೆಸರಿನಲ್ಲಿ 100 ಅಡಿ ಎತ್ತರದ ಮೋದಿ ಪ್ರತಿಮೆಯಿರುವ ದೇವಾಲಯವನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಿದ್ದಾರೆ. 
ಕಳೆದ ವರ್ಷ ಸೇವೆಯಿಂದ ನಿವೃತ್ತರಾದ ಉತ್ತರಪ್ರದೇಶದ ಮೀರತ್‌ ಜಿಲ್ಲೆಯ ನಿವೃತ್ತ ಇಂಜಿನಿಯರ್ ಜೆಪಿ ಸಿಂಗ್, ಸರ್ದಾನಾ ಪಟ್ಟಣದಲ್ಲಿ ಮೋದಿ ಮಂದಿರ ದೇವಾಲಯವನ್ನು ನಿರ್ಮಿಸಿ 100 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆಯನ್ನು ಸ್ಥಾಪಿಸುವ  ಯೋಜನೆ ಹೊಂದಿದ್ದಾರೆ. ಆಕ್ಟೋಬರ್ 23 ರಂದು ಭೂಮಿ ಪೂಜೆ ನೆರವೇರಲಿದ್ದು, ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.  
 
ಕಳೆದ 70 ವರ್ಷಗಳಿಂದ ದೇಶದಲ್ಲಿ ದುರಾಡಳಿತವಿತ್ತು. ಇದೀಗ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ದೇಶ ವೇಗವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇಂತಹ ಶ್ರೇಷ್ಠ ವ್ಯಕ್ತಿಗೆ ಸ್ಮಾರಕ ನಿರ್ಮಿಸುವುದು ಅರ್ಹವಾಗಿದೆ. ಆದ್ದರಿಂದ ಮೋದಿ ಮಂದಿರ ನಿರ್ಮಿಸಲು ನಿರ್ಧರಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಮೋದಿ ಮೋದಿರ ದೇವಾಲಯದೊಳಗೆ 100 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ. ದೇವಾಲಯದ ಗರ್ಭಗುಡಿಯಲ್ಲಿ ಮೋದಿ ಮೂರ್ತಿಯಿರುವುದಿಲ್ಲ. ಯಾಕೆಂದರೆ ಮೋದಿ ದೇವರಲ್ಲ. ದೇವಾಲಯದ ಗರ್ಭಗುಡಿಯೊಳಗೆ ವಿಷ್ಣು ಮತ್ತು ಲಕ್ಷ್ಮಿಯ ಮೂರ್ತಿಗಳಿರಲಿವೆ. ಪ್ರಧಾನಿ ಮೋದಿಯನ್ನು ಗೌರವಿಸುವ ಉದ್ದೇಶದಿಂದ ದೇವಾಲಯ ನಿರ್ಮಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. 
 
ಯೋಜನೆಯ ಸಂಪೂರ್ಣ ವೆಚ್ಚ ರೂ. 10 ಕೋಟಿಯಾಗಲಿದ್ದು ಎರಡು ವರ್ಷಗಳಲ್ಲಿ ಪ್ರತಿಮೆ ಮತ್ತು ದೇವಾಲಯ ನಿರ್ಮಾಣ ಕಾರ್ಯ ಮುಕ್ತಾಯವಾಗಲಿದೆ. ನಂತರ ಸಾರ್ವಜನಿಕರಿಗೆ ತೆರೆದಿರಲಿದೆ. ವೆಚ್ಚವಾಗುವ 10 ಕೋಟಿ ರೂ. ಹಣ ದೇಣಿಗೆಗಳ ಮೂಲಕ ಬರುತ್ತದೆ ಎಂದು ನಿವೃತ್ತ ಇಂಜಿನಿಯರ್ ಜೆ.ಪಿ.ಸಿಂಗ್ ಮಾಹಿತಿ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments