Webdunia - Bharat's app for daily news and videos

Install App

ಸಮಾಜವಾದಿ ನಾಯಕನ ಅನುಮಾನಾಸ್ಪದ ಸಾವು

Webdunia
ಬುಧವಾರ, 1 ಫೆಬ್ರವರಿ 2017 (12:12 IST)
ಸಮಾಜವಾದಿ ಪಕ್ಷದ ನಾಯಕ ಸಂಜಯ್ ನಗರ್ ಅವರು ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮೃತ ಶರೀರ ಸುರಜ್‌ಪುರ್ ಪ್ರದೇಶದಲ್ಲಿ ಮರವೊಂದಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಕಂಡುಬಂದಿದೆ. 
ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತನ ಸಂಬಂಧಿಕರು ಮತ್ತು ಬೆಂಬಲಿಗರು ಆರೋಪಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 
 
ಸಂಜಯ್ ಈ ಹಿಂದೆ ಸಮಾಜವಾದಿ ಪಕ್ಷದ ಯುವ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು. 
 
ಮೃತರು ಧರಿಸಿದ್ದ ಶರ್ಟ್ ಜೇಬಿನಲ್ಲಿ ಡೆತ್ ನೋಟ್ ಸಹ ಸಿಕ್ಕಿದ್ದು, ತಮ್ಮ ಸಾವಿನ ಬಳಿಕ ಮಕ್ಕಳ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಪಕ್ಷದ ಹಿರಿಯ ನಾಯಕರಾಗಿರುವ ರಾಜ್‌ಕುಮಾರ್ ಭಾಟಿ, ನರೇಂದ್ರ ನಗರ್,  ಜಿಲ್ಲಾ ಮ್ಯಾಜಿಸ್ಟ್ರೇಟ್ ಎನ್.ಪಿ. ಸಿಂಗ್ ಮತ್ತು ಇತರರಿಗೆ ಅಮತ್ತು ಇತರರಿಗೆ ಮನವಿ ಮಾಡಿಕೊಂಡಿದ್ದಾರೆ. 
 
ಕಳೆದ ಮೂರು ದಿನಗಳ ಹಿಂದೆ ಕೆಲ ವ್ಯಾಪಾರಿಗಳು ಮತ್ತು ಸಂಜಯ್‌ ನಡುವೆ ವಾದ ವಾಗ್ವಾದ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. 
 
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments