Webdunia - Bharat's app for daily news and videos

Install App

ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಆಂಧ್ರ ಬಂದ್‌

Webdunia
ಮಂಗಳವಾರ, 2 ಆಗಸ್ಟ್ 2016 (11:28 IST)
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸುವುದನ್ನು ವಿರೋಧಿಸಿ ವೈಎಸ್ಆರ್ ಕಾಂಗ್ರೆಸ್‌ ಇಂದು ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ. ಕಾಂಗ್ರೆಸ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಸಹ ಬಂದ್‌ಗೆ ಬೆಂಬಲ ನೀಡಿವೆ. ಆಂಧ್ರಪ್ರದೇಶಕ್ಕೆ 10 ವರ್ಷ ವಿಶೇಷ ಸ್ಥಾನಮಾನ ನೀಡಬೇಕು ಎಂಬುವುದು ಪ್ರತಿಭಟನಾಕಾರರ ಬೇಡಿಕೆಯಾಗಿದೆ.


ಹೈದರಾಬಾದ್‌, ವಿಜಯವಾಡ, ತಿರುಮಲ, ವಿಶಾಖಪಟ್ಟಣ ಸೇರಿದಂತೆ 13 ಜಿಲ್ಲೆಗಳಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,  ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್‌ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರ ಸಹ ಸಂಪೂರ್ಣ ಸ್ಥಗಿತಗೊಂಡಿದೆ.
ತಿರುಪತಿಗೂ ಬಂದ್ ಬಿಸಿ ತಟ್ಟಿದ್ದು, ಭಕ್ತಾದಿಗಳೂ ಅಲ್ಲಿಂದ ಮರಳಲು ಪರದಾಡುತ್ತಿದ್ದಾರೆ. ರೈಲ್ವೆ ಸಂಚಾರವೂ ಬಂದ್ ಆಗುವ ಸಾಧ್ಯತೆ ಇದೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ- ಟಿಡಿಪಿ ಮೈತ್ರಿಕೂಟ ಆಂಧ್ರಕ್ಕೆ 5 ವರ್ಷಗಳ ಬದಲಿಗೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಅಧಿಕಾರಕ್ಕೇರಿ 2  ವರ್ಷಗಳಾದರೂ ಈ ಭರವಸೆ ಈಡೇರಿಲ್ಲ. ವಿಶೇಷ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಟಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ವಿಫಲವಾಗಿದೆ. ಈ ಹಿಂದೆ ತಿರುಪತಿಯಲ್ಲಿ ನೀಡಿದ್ದ ಭರವಸೆಯನ್ನು ಪ್ರಧಾನಿ ಮೋದಿ ಮರೆತಂತಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಹೇಳಿದೆ.

ವಿರೋಧ ಪಕ್ಷಗಳ ಒತ್ತಡ ಹೆಚ್ಚುತ್ತಿದ್ದಂತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಕುರಿತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಚಿಂತಿಸುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments