Webdunia - Bharat's app for daily news and videos

Install App

‘ಸತ್ಯದ ಪರ ನಿಲ್ಲಿ’: ರಮಣ್

Webdunia
ಶುಕ್ರವಾರ, 26 ನವೆಂಬರ್ 2021 (18:17 IST)
ದೆಹಲಿ :  ಯಾವುದು ಸರಿ ಆಗಿರುವುದೋ ಅದರ ಪರ  ಹಾಗೂ ಯಾವುದೂ ತಪ್ಪಾಗಿರುವುದೋ ಅದರ ವಿರುದ್ಧ ನಿಲ್ಲಿ ಎಂದು ಬಾರ್ ಅಸೋಸಿಯೇಶನ್ ಸದಸ್ಯರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ  ಎನ್. ವಿ .ರಮಣ್ ಮನವಿ ಮಾಡಿದರು.
ಸುಪ್ರೀಂಕೋರ್ಟ್ ಬಾರ್ ಕೌನ್ಸಿಲ್ ಆಯೋಜಿಸಿದ ಸಂವಿಧಾನ ದಿನಆಚರಣೆ ಕಾರ್ಯಕ್ರಮದಲ್ಲಿ ಅವರು, ಪ್ರಚೋದಿತ ಹಾಗೂ ಉದ್ದೇಶ ಪೂರ್ವಕ ದಾಳಿಯಿಂದ ನ್ಯಾಯಾಂಗವನ್ನು ರಕ್ಷಿಸಿ ಎಂದು ವಕೀಲರಿಗೆ  ಹೇಳಿದರು. ಚರ್ಚೆಗೆ ಅವಕಾಶ ನೀಡಿರುವುದೇ  ಭಾರತೀಯ ಸಂವಿಧಾನದ ಮುಖ್ಯ ವೈಶಿಷ್ಟ್ಯವಾಗಿದೆ. ವಕೀಲರು ಹಾಗೂ ನ್ಯಾಯಾಧೀಶರು ಒಂದು ದೊಡ್ಡ ಕುಟುಂಬದ ಭಾಗ ನೀವೆಲ್ಲರೂ ನ್ಯಾಯಾಂಗ ಉಳಿವಿಗೆ ಶ್ರಮಿಸಬೇಕು.
ಸಂಸ್ಥೆಯನ್ನು ಉದ್ದೇಶಿತ ದಾಳಿಯಿಂದ ರಕ್ಷಿಸಬೇಕು ಎಂದರು. ನವೆಂಬರ್ 26ರನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ.  1949 ಈ ದಿನ ಸಂವಿಧಾನವನ್ನು ಭಾರತವೂ ಸಂವಿಧಾನವನ್ನು ಔಪಾಚಾರಿಕವಾಗಿ ಅಂಗೀಕರಿಸಿತು. ನಂತರ 1950ರ ಜನವರಿ 26 ರಂದು ಕಾರ್ಯ ರೂಪಕ್ಕೆ ಬಂತು ಎಂದರು.
ಭಾರತದ ಸಂವಿಧಾನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಶ್ರೇಷ್ಠ ಗ್ರಂಥವೆಂದು ಪರಿಗಣಿಸಲಾಗುತ್ತದೆ. ವಿವಿಧ ಭಾಷೆ, ಆಚರಣೆ, ಸಂಸ್ಕೃತಿ ಮತ್ತು ಭೌಗೋಳಿಕ ವೈವಿಧ್ಯತೆಗಳನ್ನು ಹೊಂದಿರುವ, 130 ಕೋಟಿಗಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಸಂವಿಧಾನವು ಆಚರಣೆಗೆ ಬಂದು ಎಪ್ಪತ್ತು ವರ್ಷಗಳನ್ನು ಪೂರೈಸಿದ್ದರೂ ಯಾವುದೇ ಅರಾಜಕತೆ ಹಾಗೂ ನೆರೆ ರಾಷ್ಟ್ರಗಳಲ್ಲಿ ಕಂಡು ಬರುವ ಸೈನಿಕ ದಂಗೆಗಳಂತಹ ಘಟನೆಗಳು ಸಂಭವಿಸಿಲ್ಲವೆಂದರೆ ಭಾರತ ಸಂವಿಧಾನದ ಗಟ್ಟಿತನವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments