‘ಸತ್ಯದ ಪರ ನಿಲ್ಲಿ’: ರಮಣ್

Webdunia
ಶುಕ್ರವಾರ, 26 ನವೆಂಬರ್ 2021 (18:17 IST)
ದೆಹಲಿ :  ಯಾವುದು ಸರಿ ಆಗಿರುವುದೋ ಅದರ ಪರ  ಹಾಗೂ ಯಾವುದೂ ತಪ್ಪಾಗಿರುವುದೋ ಅದರ ವಿರುದ್ಧ ನಿಲ್ಲಿ ಎಂದು ಬಾರ್ ಅಸೋಸಿಯೇಶನ್ ಸದಸ್ಯರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ  ಎನ್. ವಿ .ರಮಣ್ ಮನವಿ ಮಾಡಿದರು.
ಸುಪ್ರೀಂಕೋರ್ಟ್ ಬಾರ್ ಕೌನ್ಸಿಲ್ ಆಯೋಜಿಸಿದ ಸಂವಿಧಾನ ದಿನಆಚರಣೆ ಕಾರ್ಯಕ್ರಮದಲ್ಲಿ ಅವರು, ಪ್ರಚೋದಿತ ಹಾಗೂ ಉದ್ದೇಶ ಪೂರ್ವಕ ದಾಳಿಯಿಂದ ನ್ಯಾಯಾಂಗವನ್ನು ರಕ್ಷಿಸಿ ಎಂದು ವಕೀಲರಿಗೆ  ಹೇಳಿದರು. ಚರ್ಚೆಗೆ ಅವಕಾಶ ನೀಡಿರುವುದೇ  ಭಾರತೀಯ ಸಂವಿಧಾನದ ಮುಖ್ಯ ವೈಶಿಷ್ಟ್ಯವಾಗಿದೆ. ವಕೀಲರು ಹಾಗೂ ನ್ಯಾಯಾಧೀಶರು ಒಂದು ದೊಡ್ಡ ಕುಟುಂಬದ ಭಾಗ ನೀವೆಲ್ಲರೂ ನ್ಯಾಯಾಂಗ ಉಳಿವಿಗೆ ಶ್ರಮಿಸಬೇಕು.
ಸಂಸ್ಥೆಯನ್ನು ಉದ್ದೇಶಿತ ದಾಳಿಯಿಂದ ರಕ್ಷಿಸಬೇಕು ಎಂದರು. ನವೆಂಬರ್ 26ರನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ.  1949 ಈ ದಿನ ಸಂವಿಧಾನವನ್ನು ಭಾರತವೂ ಸಂವಿಧಾನವನ್ನು ಔಪಾಚಾರಿಕವಾಗಿ ಅಂಗೀಕರಿಸಿತು. ನಂತರ 1950ರ ಜನವರಿ 26 ರಂದು ಕಾರ್ಯ ರೂಪಕ್ಕೆ ಬಂತು ಎಂದರು.
ಭಾರತದ ಸಂವಿಧಾನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಶ್ರೇಷ್ಠ ಗ್ರಂಥವೆಂದು ಪರಿಗಣಿಸಲಾಗುತ್ತದೆ. ವಿವಿಧ ಭಾಷೆ, ಆಚರಣೆ, ಸಂಸ್ಕೃತಿ ಮತ್ತು ಭೌಗೋಳಿಕ ವೈವಿಧ್ಯತೆಗಳನ್ನು ಹೊಂದಿರುವ, 130 ಕೋಟಿಗಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಸಂವಿಧಾನವು ಆಚರಣೆಗೆ ಬಂದು ಎಪ್ಪತ್ತು ವರ್ಷಗಳನ್ನು ಪೂರೈಸಿದ್ದರೂ ಯಾವುದೇ ಅರಾಜಕತೆ ಹಾಗೂ ನೆರೆ ರಾಷ್ಟ್ರಗಳಲ್ಲಿ ಕಂಡು ಬರುವ ಸೈನಿಕ ದಂಗೆಗಳಂತಹ ಘಟನೆಗಳು ಸಂಭವಿಸಿಲ್ಲವೆಂದರೆ ಭಾರತ ಸಂವಿಧಾನದ ಗಟ್ಟಿತನವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments