Webdunia - Bharat's app for daily news and videos

Install App

ಮೋದಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ: ಬಿಜೆಪಿ ನಾಯಕರಿಗೆ ಅಮಿತ್ ಶಾ

Webdunia
ಗುರುವಾರ, 3 ಸೆಪ್ಟಂಬರ್ 2015 (16:31 IST)
ಬಿಜೆಪಿ ಪಕ್ಷದ ಸಾಧನೆಗಳ ಬಗ್ಗೆ ಜನತೆಗೆ ಮನವರಿಕೆಯಾಗಲು ಸಾರ್ವಜನಿಕವಾಗಿ ಚರ್ಚಾಕೂಟಗಳನ್ನು ಆಯೋಜಿಸಿ ಎಂದು ಪದಾಧಿಕಾರಿಗಳಿಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ನೀಡಿದ್ದಾರೆ.
 
ಬಿಜೆಪಿ ವಿರುದ್ಧ ಬಹಿರಂಗ ಸಭೆಗಳಲ್ಲಿ ಮತ್ತು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿರುವುದು ಬಿಜೆಪಿ ಹಿರಿಯ ನಾಯಕರ ನಿದ್ದೆಗೆಡಿಸಿದೆ. ಪಕ್ಷದ ಹಿರಿಯ ನಾಯಕರು ವಿಪಕ್ಷಗಳ ತಂತ್ರಕ್ಕೆ ರಣತಂತ್ರ ರೂಪಿಸಬೇಕು ಎಂದು ಕರೆ ನೀಡಿದ್ದಾರೆ.
 
ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ಚರ್ಚಾ ಕೂಟ, ಸಾಮಾಜಿಕ ಅಂತರ್ಜಾಲ ತಾಣಗಳ ಉಪಯುಕ್ತ ಬಳಕೆ ಹಾಗೂ ಖ್ಯಾತ ಸಂಪಾದಕರು ಮತ್ತು ಪತ್ರಕರ್ತರೊಂದಿಗೆ ಸೌಹಾರ್ದಯುತ ಸಂಬಂಧ ಬೆಳಸಿಕೊಳ್ಳಬೇಕು ಎಂದು ಅಮಿತ್ ಶಾ 12 ಪುಟಗಳ ಪತ್ರವನ್ನು ಪಕ್ಷದ ಪದಾಧಿಕಾರಿಗಳಿಗೆ ರವಾನಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರಧ ಸಾಧನೆಗಳನ್ನು ದೇಶದ ಮೂಲೆ ಮೂಲೆಗಳಿಗೆ ತಲುಪಿಸಬೇಕಾಗಿದೆ. ಸರಕಾರದ ವಿರುದ್ಧದ ಸುದ್ದಿಗಳಲ್ಲಿ ಹುರುಳಿಲ್ಲ ಎನ್ನುವ ಬಗ್ಗೆ ದಾಖಲೆ ಸಮೇತ ಜನತೆಗೆ ಮನವರಿಕೆ ಮಾಡಿಕೊಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪತ್ರದಲ್ಲಿ ತಿಳಿಸಿದ್ದಾರೆ  
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments