Webdunia - Bharat's app for daily news and videos

Install App

ಸ್ಟಿಂಗ್ ಆಪರೇಶನ್: ಸಿಬಿಐ ಕಚೇರಿಗೆ ಆಗಮಿಸಿದ ಉತ್ತರಾಖಂಡ ಸಿಎಂ ರಾವತ್

Webdunia
ಮಂಗಳವಾರ, 24 ಮೇ 2016 (10:51 IST)
ರಾಜಕೀಯ ಬಿಕ್ಕಟ್ಟು ವೇಳೆ ನಡೆದಿದ್ದ ಸ್ಟಿಂಗ್ ಆಪರೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಸಿಬಿಐ ಕಚೇರಿಗೆ ಹಾಜರಾಗಿದ್ದಾರೆ.
 
ಸ್ಟಿಂಗ್ ಆಪರೇಶನ್ ಕುರಿತಂತೆ ಮಂಗಳವಾರದಂದು ಸಿಬಿಐ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುವಂತೆ ಮುಖ್ಯಮಂತ್ರಿ ರಾವತ್‌ಗೆ ಕೋರಿತ್ತು. ಈ ಹಿನ್ನೆಲೆಯಲ್ಲಿ ರಾವತ್ ಇಂದು ವಿಚಾರಣೆಗಾಗಿ ಹಾಜರಾಗಿದ್ದಾರೆ.
 
ಉತ್ತರಾಖಂಡ್‌ನಲ್ಲಿ ಒಂಬತ್ತು ಬಂಡಾಯ ಶಾಸಕರು ಸಿಎಂ ರಾವತ್ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ್ದರು. ಶಾಸಕರ ಮನವೊಲಿಕೆಗಾಗಿ ಸ್ಟಿಂಗ್ ಆಪರೇಶನ್ ನಡೆಸಿದ್ದಾರೆ ಎಂದು ಬಿಜೆಪಿ ಸ್ಟಿಂಗ್ ಆಪರೇಶನ್‌ನ ವಿಡಿಯೋ ಬಿಡುಗಡೆ ಮಾಡಿದ್ದರಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿತ್ತು.
 
ಮುಖ್ಯಮಂತ್ರಿ ಹರೀಶ್ ರಾವತ್ ಸುದ್ದಿಗಾರರೊಂದಿಗೆ ಮಾತನಾಡಿ ಅದೊಂದು ನಕಲಿ ವಿಡಿಯೋ. ಶಾಸಕರ ಖರೀದಿ ಗೋಜಿಗೆ ನಾವು ಹೋಗಿಲ್ಲ. ಇದೊಂದು ಬಿಜೆಪಿಯ ಕುತಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನಿಖಾ ಸಂಸ್ಥೆಯಾದ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾವತ್ ಕಿಡಿಕಾರಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ಸಿಬಿಐ ವಿಚಾರಣೆಗೆ ಸಹಕರಿಸುತ್ತೇನೆ ಎಂದು ಉತ್ತರಾಖಂಡ ಸಿಎಂ ಹರೀಶ್ ರಾವತ್ ಹೇಳಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments