Webdunia - Bharat's app for daily news and videos

Install App

ಗುಜರಾತಿನಲ್ಲಿ ಕಲಿತದ್ದು ದೆಹಲಿ ಕೆಲಸಕ್ಕೆ ನೆರವಾಯಿತು: ನರೇಂದ್ರ ಮೋದಿ

Webdunia
ಗುರುವಾರ, 1 ಸೆಪ್ಟಂಬರ್ 2016 (16:01 IST)
ಗುಜರಾತ್ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಯ ಸೇವೆಯು ನವದೆಹಲಿಯಲ್ಲಿ ಪ್ರಧಾನಿಯಾಗಿ ತಮ್ಮ ಕೆಲಸಕ್ಕೆ ಸಹಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಪ್ರಧಾನಿಯಾಗಿ ಎರಡು ವರ್ಷಗಳ ಬಳಿಕ ತಾವು ನಿರ್ದಿಷ್ಟ ಕೆಲಸವನ್ನು ಹೇಗೆ ಮಾಡಬೇಕೆಂದು ಕಲಿತುಕೊಂಡೆ ಎಂದು ನುಡಿದರು.
 
ತವರು ರಾಜ್ಯಕ್ಕೆ ಕೆಟ್ಟ ಹೆಸರು ತರುವ ಯಾವುದೇ ಕೆಲಸವನ್ನು ತಾವು ಮಾಡುವುದಿಲ್ಲ ಎಂದು ಗುಜರಾತಿನ ಜನರಿಗೆ ಮೋದಿ ಭರವಸೆ ನೀಡಿದರು.  ನಾನು ದೆಹಲಿಗೆ ಹೋದ ಮೇಲೆ ರಾಜ್ಯಕ್ಕೆ ಆಗಾಗ್ಗೆ ಬರುತ್ತಿಲ್ಲವೆಂಬ ದೂರುಗಳು ತುಂಬಾ ಬಂದಿವೆ.
 
ನಾನು ದೆಹಲಿಗೆ ಹೋದಾಗ ಎಲ್ಲವೂ ಹೊಸದಾಗಿ ಕಂಡಿತು. ಅಲ್ಲಿ ಕಲಿಯುವುದಕ್ಕೆ, ಗಮನಿಸುವುದಕ್ಕೆ ವಿಷಯಗಳು ತುಂಬಾ ಇದ್ದವು. ಈಗ ನಾನು ಕೆಲಸವನ್ನು ಪರಿಪೂರ್ಣವಾಗಿ ಕಲಿತಿದ್ದೇನೆ ಎಂದು ಮೋದಿ ಹೇಳಿದರು. ಗುಜರಾತಿನಿಂದ ಕಲಿತದ್ದು ಕೂಡ ನನಗೆ ತುಂಬಾ ಉಪಯುಕ್ತವಾಗಿದೆ ಎಂದು 2001ರಿಂದ 2014ರ ಮಧ್ಯಾವಧಿವರೆಗೆ ಮುಖ್ಯಮಂತ್ರಿಯಾಗಿದ್ದ ಮೋದಿ ಹೇಳಿದರು.
 ದೇಶದ ಜನತೆ ಗುಜರಾತಿನ ಪುತ್ರನನ್ನು ಪ್ರಧಾನಿಯಾಗಿ ಸ್ವೀಕರಿಸಿದ ಮೇಲೆ ರಾಜ್ಯಜನತೆ ನಾಚಿಕೆ ಪಡುವಂತ ಯಾವುದೇ ಕೆಲಸವನ್ನು ತಾವು ಮಾಡುವುದಿಲ್ಲ ಎಂದು ಪ್ರಧಾನಿ ಭರವಸೆ ನೀಡಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments