Select Your Language

Notifications

webdunia
webdunia
webdunia
webdunia

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ
ಹೈದರಾಬಾದ್ , ಗುರುವಾರ, 12 ಜನವರಿ 2023 (07:55 IST)
ಹೈದರಾಬಾದ್ : ಮತ್ತೆ ವಂದೇ ಭಾರತ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

ವಿಶಾಖಪಟ್ಟಣಂನಲ್ಲಿ ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಬೇಕಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಕೋಚ್ನ ಎರಡು ಕಿಟಕಿಯ ಗಾಜುಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಕಂಚರಪಾಲೆಂ ಬಳಿ ರೈಲು ನಿರ್ವಹಣೆಗಾಗಿ ನಿಂತಿದ್ದಾಗ ಈ ಘಟನೆ ನಡೆದಿದೆ. ಬುಧವಾರ ಸಂಜೆ 6:30 ಕ್ಕೆ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿಗೆ ಯಾರೋ ಕಲ್ಲು ತೂರಾಟ ನಡೆಸಿದರು.

ಎರಡು ಕಿಟಕಿ ಗಾಜುಗಳು ಸಂಪೂರ್ಣವಾಗಿ ಒಡೆದುಹೋಗಿದ್ದು ಇದನ್ನು ಬದಲಾಯಿಸಬೇಕಾಗಿದೆ. ಇದು ಅತ್ಯಂತ ದುರದೃಷ್ಟಕರ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನುಪ್ ಕುಮಾರ್ ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ