Select Your Language

Notifications

webdunia
webdunia
webdunia
webdunia

ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ?

ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ?
ನವದೆಹಲಿ , ಸೋಮವಾರ, 20 ಫೆಬ್ರವರಿ 2023 (11:09 IST)
ನವದೆಹಲಿ  : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದೆಹಲಿಯಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಘಟನೆ ನಡೆದಾಗ ಓವೈಸಿ ದೆಹಲಿಯ ನಿವಾಸದಲ್ಲಿರಲಿಲ್ಲ. ಬದಲಿಗೆ ಜೈಪುರಕ್ಕೆ ಕಾರ್ಯನಿಮಿತ್ತ ತೆರಳಿದ್ದರು. ಈ ಬಗ್ಗೆ ಅಸಾದುದ್ದೀನ್ ಓವೈಸಿ ಸರಣಿ ಟ್ವೀಟ್ ಮಾಡಿದ್ದಾರೆ.
ನನ್ನ ದೆಹಲಿ ನಿವಾಸದ ಮೇಲೆ ಮತ್ತೆ ದಾಳಿ ನಡೆದಿದೆ. 2014ರಿಂದ ಇದು ನಾಲ್ಕನೇ ಘಟನೆ ಎಂದು ಕಿಡಿಕಾರಿದರು.

ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿಗಳು ಮುರಿದು ಬಿದ್ದಿವೆ. ಈ ಬಗ್ಗೆ ಮನೆಯಲ್ಲಿದ್ದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಿಬ್ಬಂದಿ ಘಟನೆಗೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗೆ ದುಡ್ಡು ಪಾವತಿಸಬೇಕು