Webdunia - Bharat's app for daily news and videos

Install App

ಜಿಎಸ್ ಟಿ ಪ್ರಚಾರ ರಾಯಭಾರಿಯಿಂದ ಅಮಿತಾಬ್ ಹಿಂದೆ ಸರಿಯುವರೇ..?

Webdunia
ಗುರುವಾರ, 22 ಜೂನ್ 2017 (08:42 IST)
ಮುಂಬೈ:ಜಿಎಸ್‌ಟಿ ಪ್ರಚಾರಾಭಿಯಾನದಿಂದ ದೂರ ಸರಿಯಿರಿ ಎಂದು ಬಾಲಿವುಡ್‌ನ‌ ಬಿಗ್‌ ಬಿ ಅಮಿತಾಭ್‌ ಬಚ್ಚನ್‌ಗೆ ಹೇಳುವ ಮೂಲಕ ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌ ವಿವಾದ ಸೃಷ್ಟಿಸಿದ್ದಾರೆ.
 
ಜಿಎಸ್‌ಟಿ ಮೂಲತಃ ಕಾಂಗ್ರೆಸ್‌ನ ಯೋಜನೆಯಾಗಿತ್ತು. ಬಿಜೆಪಿ ವಿರೋಧ ಪಕ್ಷದಲ್ಲಿದ್ದಷ್ಟು  ಕಾಲವೂ ಅದು ಜಿಎಸ್‌ಟಿ ಯನ್ನು ವಿರೋಧಿಸುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮೂಲ ಜಿಎಸ್‌ಟಿಯನ್ನು ಸಡಿಲುಗೊಳಿಸಿ ಜಾರಿಗೆ ತರಲು ಮುಂದಾಯಿತು; ಇದು ನಮಗೆ ಸ್ವೀಕಾರಾರ್ಹವಾಗಿರಲಿಲ್ಲ' ಎಂದು ನಿರುಪಮ್‌ ತಿಳಿಸಿದ್ದಾರೆ. ಇಡಿಯ ದೇಶಕ್ಕೆ ಏಕರೂಪದ ತೆರಿಗೆಯಾಗಿ ಜಿಎಸ್‌ಟಿಯನ್ನು ತರಲು ಕಾಂಗ್ರೆಸ್‌ ಬಯಸಿತ್ತು. ಆದರೆ ಬಿಜೆಪಿ ಅದನ್ನು ನಾಲ್ಕು ಹಂತಗಳ ತೆರಿಗೆ ಮತ್ತು ಮೂರು ವಿವಿಧ ಬಗೆಯ ಉಪ ನಮೂನೆಯೊಂದಿಗೆ ಜಾರಿಗೆ ತರುತ್ತಿದೆ ಎಂಬುದು ಅವರ ಆಕ್ಷೇಪ. 
 
ಜಿಎಸ್‌ಟಿ ಮುಂಬರುವ ದಿನಗಳಲ್ಲಿ ವಾಪಾರಿ ವರ್ಗದವರ ಆಕ್ರೋಶಕ್ಕೆ ಗುರಿಯಾಗುವುದು ನಿಶ್ಚಿತ; ಹಾಗಾಗಿ ಅವರ ವಿರೋಧವನ್ನು ಕಟ್ಟಿಕೊಳ್ಳದಿರುವುದೇ ಲೇಸು ಮತ್ತು ಬಿಜೆಪಿಯ ಮೂರ್ಖತನದಲ್ಲಿ ಅಮಿತಾಬ್ ಬಚ್ಚನ್  ಭಾಗಿಯಾಗಬಾರದು. ಅಮಿತಾಭ್‌  ಈಗಿಂದಲೇ ಜಿಎಸ್‌ಟಿ ಪ್ರಚಾರಾಭಿಯಾನದಿಂದ ದೂರ ಸರಿಯಿರಿ; ನೀವು ಎಲ್ಲರಿಗೂ ತಿಳಿದಿರುವ ಮತ್ತು ಅತ್ಯಂತ ಘನತೆವೆತ್ತ ವ್ಯಕ್ತಿ; ಮೇಲಾಗಿ ನಾನು ನಿಮ್ಮ ಅಭಿಮಾನಿ ಎಂದು ಹೇಳಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments