Webdunia - Bharat's app for daily news and videos

Install App

ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ, ಮಳೆ: ಐವರು ಸಾವು, ನೂರಾರು ಮಂದಿಗೆ ಗಾಯ

Sampriya
ಸೋಮವಾರ, 1 ಏಪ್ರಿಲ್ 2024 (14:08 IST)
ಪಶ್ಚಿಮ ಬಂಗಾಳ: ಇಲ್ಲಿನ ಜಲಪೈಗುರಿ ಜಿಲ್ಲೆಯ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಅವಘಡದಲ್ಲಿ ಸಾವು, ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ಈಗಾಗಲೇ ಐದು ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ. ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ಧಾವಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಮಳೆ ಸಂಬಂಧಿತ ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ. ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದೆ. ಮೃತರ ಕುಟುಂಬ ಸದಸ್ಯರನ್ನು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಮಮತಾ ಹೇಳಿದ್ದಾರೆ.

ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಸ್ಯ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments