Webdunia - Bharat's app for daily news and videos

Install App

ಕೊರೊನಾ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ 'ಲಾಕ್ ಡೌನ್' ಜಾರಿ : ಕೇರಳ ಸರ್ಕಾರ ಘೋಷಣೆ

Webdunia
ಸೋಮವಾರ, 20 ಸೆಪ್ಟಂಬರ್ 2021 (08:53 IST)
ನವದೆಹಲಿ : ಕೋವಿಡ್-19 ಸೋಂಕಿನ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ವಿಧಿಸುವುದಾಗಿ ಕೇರಳ ಸರ್ಕಾರ ಭಾನುವಾರ (ಸೆಪ್ಟೆಂಬರ್ 19) ಘೋಷಿಸಿದೆ.

ಕೊರೊನಾ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಮತ್ತು ಕೊರೊನಾ ಬಾಧಿತ ಸ್ಥಳಗಳಿಗೆ ವಾರಕ್ಕೊಮ್ಮೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಭೇಟಿ ನೀಡಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕೊರೊನಾ ಬಾಧಿತ ಪ್ರದೇಶಗಳನ್ನು ವೆಬ್ ಸೈಟ್ ಗಳು ಮತ್ತು ಇತರ ಮಾಧ್ಯಮಗಳ ಮೂಲಕ ಪ್ರಚಾರ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. 'ಜಿಲ್ಲಾಧಿಕಾರಿಗಳು ಮಾರ್ಗಸೂಚಿಗಳ ಪ್ರಕಾರ ಸೂಕ್ಷ್ಮ ನಿಯಂತ್ರಿತ ವಲಯಗಳಿಗೆ ಮತ್ತಷ್ಟು ಸೂಚನೆ ನೀಡಬೇಕು ಮತ್ತು ಅದರಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಬೇಕು' ಎಂದು ಜಾಯ್ ಹೇಳಿದರು.
ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 19,653 ತಾಜಾ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಮತ್ತು 152 ಸಾವುನೋವುಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 45,08,493 ಕ್ಕೇರಿದೆ ಮತ್ತು ಸಾವಿನ ಸಂಖ್ಯೆ 23,591, ಕ್ಕೆ ಏರಿದೆ ಎಂದು ಮೂಲಗಳು ತಿಳಿಸಿದೆ. ರಾಜ್ಯದಲ್ಲಿ ಪ್ರಸ್ತುತ 1,73,631 ಸಕ್ರಿಯ ಪ್ರಕರಣಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments