Webdunia - Bharat's app for daily news and videos

Install App

ಸ್ಯಾನಿಟರಿ ಪ್ಯಾಡ್ ಗಳನ್ನು ಪ್ರಧಾನಿ ಮೋದಿಗೆ ಕಳುಹಿಸಲಿದ್ದಾರಂತೆ ವಿದ್ಯಾರ್ಥಿಗಳು!

Webdunia
ಗುರುವಾರ, 11 ಜನವರಿ 2018 (10:59 IST)
ಮಧ್ಯಪ್ರದೇಶ : ಪ್ರಧಾನಿ ಮೋದಿ ಅವರು ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿಎಸ್ ಟಿ ತೆರಿಗೆಯನ್ನು ವಿಧಿಸಿದ ಹಿನ್ನಲೆಯಲ್ಲಿ  ಅದನ್ನು ಹಿಂಪಡೆಯುವಂತೆ ಮಧ್ಯಪ್ರದೇಶದ ವಿದ್ಯಾರ್ಥಿಗಳು ಮೋದಿ ಅವರ  ವಿರುದ್ದ ಪ್ರತಿಭಟನೆ ಮಾಡಲು ಪ್ರಾರಂಭಿಸಿದ್ದಾರೆ.

 
ಪ್ರಧಾನಿ ಮೋದಿ ಅವರು ಸ್ಯಾನಿಟರಿ ಪ್ಯಾಡ್ ಗಳ ಮೇಲೆ 12% ಜಿಎಸ್ ಟಿ ತೆರಿಗೆಯನ್ನು ವಿಧಿಸಿದ್ದು, ಇದನ್ನು ತೆಗೆದು ಹಾಕಬೇಕು ಎಂದು ಮಧ್ಯಪ್ರದೇಶದ ಗ್ವಾಲಿಯಾರ್ ವಿದ್ಯಾರ್ಥಿಗಳು 1 ಸಾವಿರ ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಹಸ್ತಾಕ್ಷರ ಬರೆದು ಮೋದಿ ಅವರಿಗೆ ಕಳುಹಿಸುವ ನಿರ್ಧಾರ ಮಾಡಿದ್ದಾರೆ. ಇದರ ಬಗ್ಗೆ ಅವರು ಸಾಮಾಜಿಕ ತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದು, ಇದಕ್ಕೆ ಮಹಿಳೆಯರು ಕೂಡ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ.



ಹಳ್ಳಿಪ್ರದೇಶದ ಮಹಿಳೆಯರು ಇದರಿಂದಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ಬಳಸದೆ ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡು ಕೆಲವು ರೋಗಗಳಿಗೆ ತುತ್ತಾಗಿದ್ದಾರೆ.  ಸ್ಯಾನಿಟರಿ ಪ್ಯಾಡ್ ಗಳ ಮೇಲೆ ವಿಧಿಸಿದ ಜಿಎಸ್ ಟಿ ತೆರಿಗೆಯನ್ನು ಹಿಂಪಡೆಯಲು ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಹೇಳಿ ತೆರಿಗೆಯನ್ನು ಹಿಂಪಡೆಯಬೇಕೆಂದು ಪ್ರತಿಭಟಿಸಿ, ಮಾರ್ಚ್ 3 ರೊಳಗೆ ಸುಮಾರು 1 ಸಾವಿರ ಪ್ಯಾಡಗಳನ್ನು ಪ್ರಧಾನಿಗೆ ಕಳುಹಿಸುವ ನಿರ್ಧಾರವನ್ನು ಮಾಡಿರುವುದಾಗಿ ವಿದ್ಯಾರ್ಥಿ ಮೋಹನ್ ಹೇಳಿದ್ದಾರೆ.



ಸ್ವಚ್ಚ ಭಾರತದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ ಅವರು  ಮಹಿಳೆಯರ ಸ್ವಚ್ಚತೆ ಹಾಗು ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಈ ಪ್ರತಿಭಟನೆಯನ್ನು ಮಹಿಳೆಯರ ಶ್ರೇಯೋಭಿವೃದ್ಧಿಯ ಸಲುವಾಗಿ ಮಾಡುತ್ತಿರುವುದಾಗಿ  ವಿದ್ಯಾರ್ಥಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments