Webdunia - Bharat's app for daily news and videos

Install App

ಇನ್ಮುಂದೆ 5-8ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ-ಕೇಂದ್ರ ಸರ್ಕಾರ

Webdunia
ಸೋಮವಾರ, 14 ಜನವರಿ 2019 (12:13 IST)
ನವದೆಹಲಿ : ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಫೇಲ್ ಮಾಡಬಾರದು ಎಂಬ 2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ಹೊಸ ತಿದ್ದುಪಡಿಯನ್ನು ಮಾಡಿದೆ.


ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. ಹೀಗಾಗಿ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೊಸ ತಿದ್ದು ಪಡಿಗೆ ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.


2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ. ಹೊಸ ತಿದ್ದುಪಡಿ ಅನ್ವಯ ಇನ್ಮುಂದೆ 5 ಮತ್ತು 8ನೇ ತರಗತಿಯ ಕೊನೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ಮುಂದಿನ ತರಗತಿಗೆ ತೇರ್ಗಡೆ ಹೊಂದುತ್ತಾರೆ.


ಒಂದು ವೇಳೆ 5-8ನೇ ತರಗತಿಯ ಪರೀಕ್ಷೆಯಲ್ಲಿ ಫೇಲ್ ಆದರೆ ಮುಂದಿನ ಎರಡು ತಿಂಗಳಲ್ಲಿ ಮರು ಪರೀಕ್ಷೆಯನ್ನ ಶಾಲೆಯವರು ನೀಡಬೇಕು ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments