Webdunia - Bharat's app for daily news and videos

Install App

ಮೋದಿ ಸರಕಾರ ಹೊಸ ಚೀನಾ ನೀತಿ ಜಾರಿಗೆ ತರಲಿ: ಸುಬ್ರಹ್ಮಣ್ಯಂ ಸ್ವಾಮಿ

Webdunia
ಸೋಮವಾರ, 29 ಜೂನ್ 2015 (18:37 IST)
ನಾವು ಕಾಂಗ್ರೆಸ್ ಪಕ್ಷದ ಹಳೆಯದಾದ ಚೀನಾ ನೀತಿಗಳನ್ನು ಪಾಲಿಸುತ್ತಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ಚೀನಾ ನೀತಿಗಳನ್ನು ರೂಪಿಸುವಂತಾಗಲು ತಜ್ಞರ ಸಭೆ ಕರೆಯಬೇಕು. ಇದರಿಂದ ನಮ್ಮ ಸಾಮರ್ಥ್ಯ, ದುರ್ಬಲತೆ ಮತ್ತು ಅವಕಾಶಗಳ ಅನಾವರಣವಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
    
ಬಿಜೆಪಿ ಸರಕಾರ ಕಾಂಗ್ರೆಸ್ ಪಕ್ಷದ ಹಳೆಯ ಚೀನಾ ನೀತಿಯನ್ನು ಅನುಸರಿಸುತ್ತಿದೆ. ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಲಕ್ವಿಯನ್ನು ಬೆಂಬಲಿಸಿದ ಚೀನಾ, ಭಾರತ ದೇಶಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಪರಿಗಣಿಸಬೇಕು ಎಂದು ತಿಳಿಸಿದ್ದಾರೆ. 
 
ಪ್ರಸ್ತುತವಿರುವ ಚೀನಾ ನೀತಿಗಳು ಸ್ಪಷ್ಟತೆಯನ್ನು ಹೊಂದಿಲ್ಲ. ಹೊಸತಾದ ಚೀನಾ ನೀತಿಗಳನ್ನು ಜಾರಿಗೆ ತರುವಂತಾಗಬೇಕು ಎಂದು ವರ್ಲ್ಡ್ ಪೀಸ್ ಫೋರಂ ಕಾನ್ಫ್‌ರೆನ್ಸ್ 2015 ಸಭೆಯಲ್ಲಿ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
 
ವಿಶ್ವಸಂಸ್ಥೆಯ ಸಭೆಯಲ್ಲಿ ಪಾಕಿಸ್ತಾನದ ಉಗ್ರ ಲಖ್ವಿ ವಿರುದ್ಧ ಚೀನಾ ಬೆಂಬಲಿಸಿದೆ ಎಂದು ಸುದ್ದಿ ತಿಳಿದಾಗ ನನಗೆ ಆಘಾತವಾಯಿತು. ನಮಗೆ ಅದು ರೆಡ್ ಸಿಗ್ನಲ್ ಎಂದು ಭಾವಿಸಲೇ ಇಲ್ಲ. ನಮ್ಮನ್ನು ನಾವು ರಕ್ಷಣೆ ಮಾಡುವಂತಹ ವಾತಾವರಣ ಸೃಷ್ಟಿಸಬೇಕು ಎಂದರು. 
 
ಚೀನಾದ ಅಧ್ಯಕ್ಷ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಿರುವುದು, ಮೋದಿ ಚೀನಾಕ್ಕೆ ಭೇಟಿ ನೀಡಿದ್ದರಿಂದ ಮಹತ್ವದ ಸಾಧನೆಯಾಗಿಲ್ಲ. ಕೇವಲ ಚೀನಾದ ಖಾಸಗಿ ಕ್ಷೇತ್ರದ ಕಂಪೆನಿಗಳಉ 20 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಸಮ್ಮತಿ ಮಾತ್ರ ಸೂಚಿಸಿವೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments