Webdunia - Bharat's app for daily news and videos

Install App

ರಘುರಾಮ್ ರಾಜನ್ ಅರ್ಥಶಾಸ್ತ್ರ ಪದವಿ ಪಡೆದೇ ಇಲ್ಲ: ಸ್ವಾಮಿ

Webdunia
ಶುಕ್ರವಾರ, 26 ಆಗಸ್ಟ್ 2016 (15:29 IST)
ಆರ್‌ಬಿಐ ಗವರ್ನರ್ ಹುದ್ದೆಯಿಂದ ನಿವೃತ್ತರಾಗುತ್ತಿರುವ ರಘುರಾಮ್ ರಾಜನ್ ವಿರುದ್ಧ ಬಿಜೆಪಿಯ ಫೈರ್‌ಬ್ರಾಂಡ್ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೆ ಹೊಸ ಆರೋಪ ಮಾಡಿದ್ದಾರೆ. ಅವರು ಅರ್ಥಶಾಸ್ತ್ರ ಪದವಿಯನ್ನೇ ಹೊಂದಿಲ್ಲ ಎಂದು ಅವರು ವಾದಿಸುತ್ತಿದ್ದಾರೆ. 

ಊರ್ಜಿತ್ ಪಟೇಲ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಆಗಿ ಆಯ್ಕೆ ಮಾಡಿರುವುದಕ್ಕೆ ಸಂತಷ ವ್ಯಕ್ತ ಪಡಿಸಿರುವ ಅವರು ರಾಜನ್ ಉತ್ತರಾಧಿಕಾರಿಯಿಂದ ಬಹಳಷ್ಟು ನಿರೀಕ್ಷೆಗಳಿವೆ ಎಂದಿದ್ದಾರೆ.
 
ಪಟೇಲ್ ಹಲವಾರು ವರ್ಷಗಳಿಂದ ರಾಜನ್ ಅವರ ಸಹಾಯಕರಾಗಿದ್ದವರು. ಹೀಗಾಗಿ ಹೊಸ ಹುದ್ದೆ ಅವರಿಗೆ ಹೊಸದೆನಿಸಲಾರದು ಎಂದು ಸ್ವಾಮಿ ಹೇಳಿದ್ದಾರೆ.
 
ಪಟೇಲ್ ಯಾಲೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿಯನ್ನು ಹೊಂದಿದ್ದಾರೆ. ರಘುರಾಮ್ ರಾಜನ್ ಅರ್ಥಶಾಸ್ತ್ರದಲ್ಲಿ ಪದವಿಯನ್ನೇ ಹೊಂದಿಲ್ಲ. ಎಂಜಿನಿಯರಿಂಗ್ ಪದವಿಯ ಬಳಿಕ ಮ್ಯಾನೇಜ್‌ಮೆಂಟ್ ಓದಿದ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ಸಾಮಾನ್ಯ ಜ್ಞಾನವೂ ಇಲ್ಲ. ಊರ್ಜಿತ್ ಪಟೇಲ್ ಹಲವಾರು ವರ್ಷಗಳಿಂದ ಆರ್‌ಬಿಐ ಉಪಾಧ್ಯಕ್ಷರಾಗಿದ್ದರು. ಹೀಗಾಗಿ ಈ ಹುದ್ದೆ ಅವರಿಗೆ ಹೊಸದೆನಿಸದು. ಅವರಿಂದ ನಾನು ಹೆಚ್ಚಿನದನ್ನು ನಿರೀಕ್ಷಿಸುತ್ತೇನೆ ಎಂದಿದ್ದಾರೆ ಸ್ವಾಮಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments