Webdunia - Bharat's app for daily news and videos

Install App

ಸುಬ್ರಮಣಿಯನ್ ಸ್ವಾಮಿ ನನ್ನ ಹೀರೋ: ಉಮಾ ಭಾರತಿ

Webdunia
ಸೋಮವಾರ, 6 ಜೂನ್ 2016 (14:11 IST)
ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಸುಬ್ರಮಣಿಯನ್ ಸ್ವಾಮಿ(ಬಿಜೆಪಿ ರಾಜ್ಯಸಭಾ ಸದಸ್ಯ) ಅವರ ಮಾತುಗಳಲ್ಲಿ ನನಗೆ ಸಂಪೂರ್ಣ ವಿಶ್ವಾಸವಿದ್ದು, ಅವರೇ ನನ್ನ ಹೀರೋ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಹೇಳಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಸ್ವಾಮಿ ಈ ವರ್ಷ ಮುಗಿಯುವುದರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿವೆ. ಮುಂದಿನ ವರ್ಷ ರಾಮ ನವಮಿ ಆಚರಣೆ ಅಯೋಧ್ಯೆಯಲ್ಲಿಯೇ ಎಂದಿದ್ದರು.ಈ ಕುರಿತು ಪ್ರತಿಕ್ರಿಯಿಸುತ್ತ ಸಚಿವೆ ಈ ಮಾತುಗಳನ್ನಾಡಿದ್ದಾರೆ.
 
ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಅವರು, ನಾನು ಸುಬ್ರಮಣಿಯನ್ ಸ್ವಾಮಿ ಅವರನ್ನು ಬಹಳ ಗೌರವಿಸುತ್ತೇನೆ. ಅವರು ನನ್ನ ಹೀರೋ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲ್ಪಟ್ಟಾಗ ನಾನು 15 -16 ವರ್ಷದವಳಾಗಿದ್ದೆ. ಆಗಲೇ ಡಾ.ಸ್ವಾಮಿ ಮತ್ತು ಜಾರ್ಜ್ ಫರ್ನಾಂಡಿಸ್ (ಮಾಜಿ ರಕ್ಷಣಾ ಸಚಿವ)  ನನ್ನ ಹೀರೋಗಳಾಗಿದ್ದರು. ಸ್ವಾಮಿ ಸದಾ ನನಗೆ ನಾಯಕರಾಗಿಯೇ ಕಾಣುತ್ತಾರೆ.ಹೀಗಾಗಿ ಅವರೇನೇ ಹೇಳಿದರೂ ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.
 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂಬ ವದಂತಿಯನ್ನು ಅಲ್ಲಗಳೆದಿರುವ ಅವರು ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಷ್ಟಚಾರದಿಂದ ಸರ್ಕಾರ ನಡೆಸುವ ಬದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments