Webdunia - Bharat's app for daily news and videos

Install App

ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬೇಲ್ ಸಿಗುತ್ತಾ?

Webdunia
ಗುರುವಾರ, 5 ಜುಲೈ 2018 (09:17 IST)
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾಸ್ಪದ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಇಂದು ಹೊರಬೀಳಲಿದೆ.

ಶಶಿ ತರೂರ್ ರನ್ನು ಆರೋಪಿಗಳಲ್ಲೊಬ್ಬರೆಂದು ಕೆಲವು ದಿನಗಳ ಹಿಂದೆ ದೆಹಲಿ ಕೋರ್ಟ್ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿತ್ತು. ಇದಾದ ಬಳಿಕ ಕಾಂಗ್ರೆಸ್ ನಾಯಕ ದೆಹಲಿ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿದೆ. ಕೋರ್ಟ್ ಆರೋಪ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿದಾಗಿನಿಂದಲೂ ತರೂರ್ ತನಗೂ ಈ ಸಾವಿಗೂ ಸಂಬಂಧವಿಲ್ಲ ಎಂದೇ ಹೇಳುತ್ತಾ ಬಂದಿದ್ದಾರೆ.

ಆದರೆ ದೆಹಲಿ ಪೊಲೀಸರು ತರೂರ್ ಅವರಿಗೆ ಜಾಮೀನು ನೀಡಬಾರದೆಂದು ವಿರೋಧಿಸುತ್ತಿದ್ದಾರೆ. ಪ್ರಭಾವಿ ನಾಯಕರಾಗಿರುವ ತರೂರ್ ವಿದೇಶಕ್ಕೆ ಪಲಾಯನ ಮಾಡಬಹುದು ಎಂದು ದೆಹಲಿ ಪೊಲೀಸರು ವಾದಿಸುತ್ತಿದ್ದಾರೆ. ಯಾವುದಕ್ಕೂ ಇಂದು ಯಾರ ಪರವಾಗಿ ತೀರ್ಪು ಬರಬಹುದೆಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments