Webdunia - Bharat's app for daily news and videos

Install App

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಅಭ್ಯರ್ಥಿ ಸ್ಪರ್ಧಿಸಿದರೆ ಬೆಂಬಲ: ಸಂಜಯ್‌ ರಾವುತ್

Sampriya
ಭಾನುವಾರ, 16 ಜೂನ್ 2024 (13:15 IST)
Photo Courtesy X
ಮುಂಬೈ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ 'ಇಂಡಿಯಾ' ಮೈತಿಕೂಟದ ಎಲ್ಲ ಪಕ್ಷಗಳ ಬೆಂಬಲ ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್‌ ರಾವುತ್, ಲೋಕಸಭಾ ಸ್ಪೀಕರ್ ಆಯ್ಕೆಯು ಅತ್ಯಂತ ನಿರ್ಣಾಯಕವಾಗಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿಗೆ ಸ್ಪೀಕರ್ ಸ್ಥಾನ ಸಿಕ್ಕರೆ, ಟಿಡಿಪಿ, ಜೆಡಿಯು, ಚಿರಾಗ್ ಪಾಸ್ವಾನ್ ಹಾಗೂ ಚಯಂತ್ ಚೌಧರಿ ಪಕ್ಷಗಳನ್ನು ಒಡೆಯುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಸ್ಥಿರ ಸರ್ಕಾರ ಇರುವುದಿಲ್ಲ. ತನ್ನನ್ನು ಬೆಂಬಲಿಸುವ ಪಕ್ಷಗಳಿಗೆ ಬಿಜೆಪಿ ದ್ರೋಹ ಬಗೆದಿರುವ ಅನುಭವ ನಮಗಿದೆ ಎಂದು ಅವರು ಹೇಳಿದ್ದಾರೆ. ಟಿಡಿಪಿ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಭಾಗವಾಗಿದೆ.

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಟಿಡಿಪಿ ಬಯಸುತ್ತಿದೆ ಎಂಬ ವಿಷಯ ನನಗೆ ತಿಳಿದು ಬಂದಿದೆ. ಹಾಗಾದರೆ ಇಂಡಿಯಾ ಮೈತ್ರಿಕೂಟವು ಈ ಕುರಿತು ಚರ್ಚಿಸಿ, ಎಲ್ಲ ಮೈತ್ರಿ ಪಕ್ಷಗಳು ಟಿಡಿಪಿಗೆ ಬೆಂಬಲವನ್ನು ಖಚಿತಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ಹೇಳಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments