Webdunia - Bharat's app for daily news and videos

Install App

ಜಿಎಸ್ ಟಿ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ? ಮನಮೋಹನ್ ಸಿಂಗ್ ರನ್ನು ಭೇಟಿ ಮಾಡಲಿರುವ ಸೋನಿಯಾ

Webdunia
ಗುರುವಾರ, 29 ಜೂನ್ 2017 (11:09 IST)
ನವದೆಹಲಿ: ಜೂನ್ 30 ರ ಮಧ್ಯರಾತ್ರಿಯಿಂದ ದೇಶದಾದ್ಯಂತ ಜಿಎಸ್ ಟಿ ತೆರಿಗೆ ಪದ್ಧತಿ ಜಾರಿಗೆ ತರಲು ಉದ್ದೇಶಿಸಿರುವ ಕೇಂದ್ರ ಸರ್ಕಾರ ಸರ್ವಪಕ್ಷಗಳೊಂದಿಗೆ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.

 
ಆದರೆ ಈ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ ಎಂಬ ಬಗ್ಗೆ ವಿಪಕ್ಷ ಕಾಂಗ್ರೆಸ್ ನಲ್ಲಿ ಗೊಂದಲವಿದೆ. ಈ ಹಿನ್ನಲೆಯಲ್ಲಿ ಜಿಎಸ್ ಟಿ ಪರ ನಿಲ್ಲಬೇಕೋ ಬೇಡವೋ ಎಂಬ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಮಾಜಿ ಪ್ರಧಾನಿ ಹಾಗೂ ಅರ್ಥ ತಜ್ಞ ಮನಮೋಹನ್ ಸಿಂಗ್ ರನ್ನು ಭೇಟಿ ಮಾಡಲಿದ್ದಾರೆ.

ಈ ಇಬ್ಬರು ನಾಯಕರ ಭೇಟಿಯ ನಂತರ ಕೈಗೊಳ್ಳುವ ನಿರ್ಧಾರದಂತೆ ಕಾಂಗ್ರೆಸ್ ಜಿಎಸ್ ಟಿ ಪರವಿರಬೇಕೋ ವಿರೋಧವಿರಬೇಕೋ ಎಂದು ನಿರ್ಧರಿಸಲಿದೆ. ಕೆಲವು ಕಾಂಗ್ರೆಸ್ ನಾಯಕರು ಈಗಾಗಲೇ ವ್ಯಾಪಾರಿಗಳ ಹಿತದೃಷ್ಟಿಯಿಂದ ಜಿಎಸ್ ಟಿಯನ್ನು ಬೆಂಬಲಿಸಬಾರದು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಡಿಎಂಕೆ, ತೃಣಮೂಲ ಕಾಂಗ್ರೆಸ್ ಜಿಎಸ್ ಟಿ ಕಾಯಿದೆಯನ್ನು ತಿರಸ್ಕರಿಸುವ ನಿರ್ಧಾರ ಮಾಡಿದೆ. ಆದರೆ ಜಿಎಸ್ ಟಿ ಕಾಯಿದೆಯನ್ನು ಲಾಂಚ್ ಮಾಡುವ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್ ರನ್ನೂ ಅತಿಥಿಯಾಗಿ ಕೇಂದ್ರ ಸರ್ಕಾರ ಆಹ್ವಾನಿಸಿರುವುದರಿಂದ ಕಾಂಗ್ರೆಸ್ ಉಭಯ ಸಂಕಟದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments