Webdunia - Bharat's app for daily news and videos

Install App

ಜಿಎಸ್ ಟಿ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ? ಮನಮೋಹನ್ ಸಿಂಗ್ ರನ್ನು ಭೇಟಿ ಮಾಡಲಿರುವ ಸೋನಿಯಾ

Webdunia
ಗುರುವಾರ, 29 ಜೂನ್ 2017 (11:09 IST)
ನವದೆಹಲಿ: ಜೂನ್ 30 ರ ಮಧ್ಯರಾತ್ರಿಯಿಂದ ದೇಶದಾದ್ಯಂತ ಜಿಎಸ್ ಟಿ ತೆರಿಗೆ ಪದ್ಧತಿ ಜಾರಿಗೆ ತರಲು ಉದ್ದೇಶಿಸಿರುವ ಕೇಂದ್ರ ಸರ್ಕಾರ ಸರ್ವಪಕ್ಷಗಳೊಂದಿಗೆ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.

 
ಆದರೆ ಈ ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ ಎಂಬ ಬಗ್ಗೆ ವಿಪಕ್ಷ ಕಾಂಗ್ರೆಸ್ ನಲ್ಲಿ ಗೊಂದಲವಿದೆ. ಈ ಹಿನ್ನಲೆಯಲ್ಲಿ ಜಿಎಸ್ ಟಿ ಪರ ನಿಲ್ಲಬೇಕೋ ಬೇಡವೋ ಎಂಬ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಮಾಜಿ ಪ್ರಧಾನಿ ಹಾಗೂ ಅರ್ಥ ತಜ್ಞ ಮನಮೋಹನ್ ಸಿಂಗ್ ರನ್ನು ಭೇಟಿ ಮಾಡಲಿದ್ದಾರೆ.

ಈ ಇಬ್ಬರು ನಾಯಕರ ಭೇಟಿಯ ನಂತರ ಕೈಗೊಳ್ಳುವ ನಿರ್ಧಾರದಂತೆ ಕಾಂಗ್ರೆಸ್ ಜಿಎಸ್ ಟಿ ಪರವಿರಬೇಕೋ ವಿರೋಧವಿರಬೇಕೋ ಎಂದು ನಿರ್ಧರಿಸಲಿದೆ. ಕೆಲವು ಕಾಂಗ್ರೆಸ್ ನಾಯಕರು ಈಗಾಗಲೇ ವ್ಯಾಪಾರಿಗಳ ಹಿತದೃಷ್ಟಿಯಿಂದ ಜಿಎಸ್ ಟಿಯನ್ನು ಬೆಂಬಲಿಸಬಾರದು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಡಿಎಂಕೆ, ತೃಣಮೂಲ ಕಾಂಗ್ರೆಸ್ ಜಿಎಸ್ ಟಿ ಕಾಯಿದೆಯನ್ನು ತಿರಸ್ಕರಿಸುವ ನಿರ್ಧಾರ ಮಾಡಿದೆ. ಆದರೆ ಜಿಎಸ್ ಟಿ ಕಾಯಿದೆಯನ್ನು ಲಾಂಚ್ ಮಾಡುವ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್ ರನ್ನೂ ಅತಿಥಿಯಾಗಿ ಕೇಂದ್ರ ಸರ್ಕಾರ ಆಹ್ವಾನಿಸಿರುವುದರಿಂದ ಕಾಂಗ್ರೆಸ್ ಉಭಯ ಸಂಕಟದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments