Publish Date: Fri, 10 Mar 2023 (15:08 IST)
Updated Date: Fri, 10 Mar 2023 (16:10 IST)
ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ದಶಪಥ ಹೆದ್ದಾರಿ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಬಣ್ಣಿಸಿದ್ದಾರೆ.
“ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ನಾಲ್ಕು ರೈಲು ಮೇಲ್ಸೇತುವೆಗಳು, ಒಂಭತ್ತು ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಮತ್ತು ಮೇಲ್ಸೇತುವೆಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು. ಇದನ್ನು ಪ್ರಧಾನಿ ಮೋದಿ ರೀಟ್ವೀಟ್ ಮಾಡಿದ್ದಾರೆ.
ramya kosira
Publish Date: Fri, 10 Mar 2023 (15:08 IST)
Updated Date: Fri, 10 Mar 2023 (16:10 IST)