Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ , ಮಂಗಳವಾರ, 22 ಅಕ್ಟೋಬರ್ 2019 (11:24 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿದ್ದು, ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.



ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಕಾಂಗ್ರೆಸ್ ಪರ ವಕೀಲರ ಮನವಿ ಮೇರೆಗೆ  ಅ.23ಕ್ಕೆ ಮುಂದೂಡಲಾಗಿತ್ತು. ಆದರೆ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ಕೇಸ್ ನ್ನು ಬೇಗ ಇತ್ಯರ್ಥ ಮಾಡಿಕೊಡಬೇಕೆಂದು ಕೇಳಿಕೊಂಡ ಹಿನ್ನಲೆಯಲ್ಲಿ ಇಂದೇ ವಿಚಾರಣೆ ನಡೆಸಲಾಗುವುದು ಎನ್ನಲಾಗಿತ್ತು.
 

ಆದರೆ ಇದೀಗ ಮತ್ತೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದರಿಂದ  ಇಂದೇ ತೀರ್ಪು ಬರುವ ನಿರೀಕ್ಷೆಯಲ್ಲಿದ್ದ  ಅನರ್ಹ ಶಾಸಕರ ಆಸೆಗೆ ಮತ್ತೆ ತಣ್ಣೀರೆಚಿದಂತಾಗಿದೆ .

 


Share this Story:

Follow Webdunia kannada

ಮುಂದಿನ ಸುದ್ದಿ

ಲಂಚಕ್ಕಾಗಿ ರೈತನಿಗೆ ಪೀಡಿಸುತ್ತಿದ್ದ ಪೊಲೀಸ್ ಅಧಿಕಾರಿ ಅಂದರ್