ಕೇರಳ ಲವ್ ಜಿಹಾದ್‌ ಪ್ರಕರಣದ ತನಿಖೆ ಎನ್‌ಐಎಗೆ: ಸುಪ್ರೀಂಕೋರ್ಟ್

Webdunia
ಬುಧವಾರ, 16 ಆಗಸ್ಟ್ 2017 (19:07 IST)
ಹಿಂದು ಮಹಿಳೆಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಮುಸ್ಲಿಂ ಯುವಕನನ್ನು ವಿವಾಹದ ಪ್ರಕರಣ ಕುರಿತಂತೆ ಎನ್‌ಐಎ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯಲ್ಲಿ ಎನ್ಐಎ ತನಿಖೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
 
ಹಿಂದೂ ಯುವತಿ ಅಖಿಲಾ ಅಶೋಕ್ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ವ್ಯಕ್ತಿ ಶಫಿನ್ ಜಹಾನ್ ಎಂಬಾತನನ್ನು ವಿವಾಹವಾಗಿರುವುದು ಪ್ರತ್ಯೇಕ ಘಟನೆಯಲ್ಲ. ಪೋಷಕರೊಂದಿಗೆ ಭಿನ್ನಾಭಿಪ್ರಾಯವಿರುವ ಅನೇಕ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸುವ ಹಿಂದೆ ಕೆಲವು ವ್ಯಕ್ತಿಗಳ ಕೈವಾಡವಿದೆ. ಇತರ ಮತಾಂತರ ಪ್ರಕರಣಗಳಲ್ಲೂ ಇದೇ ವ್ಯಕ್ತಿಗಳ ಕೈವಾಡ ಕಂಡುಬಂದಿದೆ ಎಂದು ಎನ್‌ಐಎ ಪರ ವಕೀಲ ಮಣಿದಂರ್ ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.  
 
ಒಂದು ವೇಳೆ, ಸುಪ್ರೀಂಕೋರ್ಟ್ ಲವ್ ಜಿಹಾದ್ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿದಲ್ಲಿ ಕೇರಳ ಸರಕಾರದಿಂದ ಯಾವುದೇ ಆಕ್ಷೇಪಣೆಯಿಲ್ಲ ಎಂದು ಸರಕಾರದ ಪರ ವಕೀಲರು ಕೋರ್ಟ್‌ಗೆ ಸ್ಪಷ್ಟನೆ ನೀಡಿದರು. 
 
ಎನ್ಐಎ ಮತ್ತು ಕೇರಳ ಪೊಲೀಸರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ನಂತರ, ಅಖಿಲಾ ವಿಚಾರಣೆ ನಡೆಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
 
ಪುತ್ರಿ ಅಖಿಲಾಳನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ವಿವಾಹಕ್ಕೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿ ಅಖಿಲಾ ತಂದೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಕೆಲ ಸಂಶಯಗಳು ವ್ಯಕ್ತವಾಗಿದ್ದರಿಂದ ಪೊಲೀಸ್ ತನಿಖೆ ನಡೆಸುವಂತೆ ಆದೇಶ ನೀಡಿತ್ತು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments