Webdunia - Bharat's app for daily news and videos

Install App

ಕೋರ್ಟ್‌ ವಾತಾವರಣ ಹಾಳು ಮಾಡಿದ ವಕೀಲನಿಗೆ ₹5 ಲಕ್ಷ ದಂಡ ವಿಧಿಸಿ ಬುದ್ಧಿ ಕಲಿಸಿದ ಸುಪ್ರೀಂ ಕೋರ್ಟ್‌

Sampriya
ಮಂಗಳವಾರ, 22 ಏಪ್ರಿಲ್ 2025 (15:58 IST)
Photo Courtesy X
ನವದೆಹಲಿ: ನ್ಯಾಯಾಲಯದ ವಾತಾವರಣ ಹಾಳು ಮಾಡಿದ ವಕೀಲರೊಬ್ಬರಿಗೆ ಮಂಗಳವಾರ ಬರೋಬ್ಬರಿ ಐದು ಲಕ್ಷ ದಂಡವನ್ನು ಸುಪ್ರೀಂ ಕೋರ್ಟ್‌ ವಿಧಿಸಿ, ಬುದ್ಧಿ ಕಲಿಸಿದೆ.

ಸಂದೀಪ್ ತೊಡಿ ಎಂಬ ವಕೀಲರಿಗೆ ದಂಡ ವಿಧಿಸಿರುವ ಸುಪ್ರೀಂ ಕೋರ್ಟ್‌, ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರಿದ್ದ ಪೀಠದ ಎದುರು ಸಂದೀಪ್ ತೊಡಿ ಎಂಬುವವರು ತಮ್ಮದೇ ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಮುಂಬೈನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಜಾಮೀನಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಕೇಂದ್ರ ಸರ್ಕಾರ, ಮುಂಬೈನ ಕೌಟುಂಬಿಕ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್ ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ. ವಿವೇಕ ಇರುವ ಯಾವುದೇ ವಕೀಲರು ಸಂವಿಧಾನದ 32ನೇ ವಿಧಿಯಡಿ ಇಂಥ ಕ್ಲುಲ್ಲಕ ಅರ್ಜಿಯನ್ನು ಸಲ್ಲಿಸುವುದಿಲ್ಲ ಎಂದು ಅರ್ಜಿಯ ವಿಚಾರಣೆ ನಡೆಸಿದ ಪೀಠದಲ್ಲಿದ್ದ ನ್ಯಾ. ವಿಕ್ರಂ ನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿ ಸಲ್ಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್‌, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ₹5 ಲಕ್ಷ ದಂಡ ಭರಿಸುವಂತೆ ವಕೀಲ ತೋಡಿಗೆ ನಿರ್ದೇಶಿಸಿತು. ಜತೆಗೆ ಹಣ ಭರಿಸಲಾಗಿದೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ಆರು ವಾರಗಳ ಗಡುವನ್ನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments