Select Your Language

Notifications

webdunia
webdunia
webdunia
webdunia

ಗೋಹತ್ಯೆ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಗೋಹತ್ಯೆ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ , ಗುರುವಾರ, 15 ಜೂನ್ 2017 (12:12 IST)
ನವದೆಹಲಿ:ಗೋಹತ್ಯೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿರುವುದರಿಂದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ವಿವರ ಕೋರಿ ಸುಪ್ರೀಂ ಕೋರ್ಟ್ ನೊಟೀಸ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
 
ಮಾಂಸಕ್ಕಾಗಿ ದನ ಕರುಗಳನ್ನು ಮಾರಾಟ ಮಾಡುವುದು ಮತ್ತು ಖರೀದಿಸುವುದಕ್ಕೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯಿಂದ ಮುಕ್ತ ವ್ಯಾಪಾರ ಹಕ್ಕನ್ನು ಜನರಿಂದ ಕಸಿದುಕೊಂಡಂತಾಗುತ್ತದೆ ಎಂದು ಆರೋಪಿಸಿ ಹೈದರಾಬಾದ್ ಮೂಲದ ಸರ್ಕಾರೇತರ ಸಂಘಟನೆಯ ಮುಖ್ಯಸ್ಥ ಮೊಹಮ್ಮದ್ ಅಬ್ದುಲ್ ಫಹೀಮ್ ಖುರೇಷಿ ಇದೇ ತಿಂಗಳ 7ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.  ಅಲ್ಲದೇ ಜನರು ತಮ್ಮ  ಖಾಸಗಿ ಬದುಕಿನ ರಕ್ಷಣೆ ಮತ್ತು ಸ್ವಾತಂತ್ರ್ಯಕ್ಕಾಗಿ ಯಾವುದೇ ವೃತ್ತಿ ಮಾಡಬಹುದು. ಅಲ್ಪಸಂಖ್ಯಾತರ ಧಾರ್ಮಿಕ ಅಭ್ಯಾಸ ಮತ್ತು ಹಿತಾಸಕ್ತಿಗಳನ್ನು ಕೇಂದ್ರ ಸರ್ಕಾರದ ನಿಯಮ ಉಲ್ಲಂಘಿಸುತ್ತದೆ ಎಂದು ದೂರಿದ್ದರು.
 
ಈ ವಿಚಾರಣೆ ಕೈಗೆತ್ತಿಕೊಮ್ದ ಸುಪ್ರೀಂ ಕೋರ್ಟ್, ಮಾಂಸಕ್ಕಾಗಿ ಗೋವುಗಳನ್ನು ವಧಿಸುವ ಮಾರುಕಟ್ಟೆಗೆ ದನಗಳ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿರುವ ಕೇಂದ್ರದ ಕ್ರಮ ಕುರಿತು ಇನ್ನು ಎರಡು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಆದೇಶ ನೀಡಿದೆ. ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡ, ಕುಮಾರಸ್ವಾಮಿ ತೀರ್ಮಾನಕ್ಕೆ ಬದ್ಧ: ಹೊರಟ್ಟಿ