Webdunia - Bharat's app for daily news and videos

Install App

ಗಾಂಧೀಜಿ ಬ್ರಿಟಿಷರ ಸೇವಕರಾಗಿದ್ದರು ಎಂದು ಕೇಳಿಸಿಕೊಳ್ಳಬೇಕಾ: ರಾಹುಲ್ ಗಾಂಧಿಗೆ ಕೋರ್ಟ್ ತರಾಟೆ

Krishnaveni K
ಶುಕ್ರವಾರ, 25 ಏಪ್ರಿಲ್ 2025 (14:06 IST)
ನವದೆಹಲಿ: ವೀರ ಸಾವರ್ಕರ್ ಬಗ್ಗೆ ಅವಹೇಳನಕಾರೀ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಛೀಮಾರಿ ಹಾಕಿದೆ. ಮುಂದೊಂದು ದಿನ ಗಾಂಧೀಜಿ ಬ್ರಿಟಿಷರ ಸೇವಕರಾಗಿದ್ದರು ಅಂತಾರೆ. ಅದನ್ನೆಲ್ಲಾ ಕೇಳಿಸಿಕೊಳ್ಳಬೇಕಾ ಎಂದು ತರಾಟೆಗೆ ತೆಗೆದುಕಂಡಿದೆ.

ರಾಹುಲ್ ಗಾಂಧಿ ಈ ಹಿಂದೆ ವಿಡಿ ಸಾವರ್ಕರ್ ಬ್ರಿಟಿಷರ ಸೇವಕ ಎಂದು ಅವಮಾನ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದರು. ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನೀಡಲಾದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಅಲಹಾಬಾದ್ ಆದೇಶಕ್ಕೆ ತಡೆ ನೀಡಿದೆ.

ಆದರೆ ರಾಹುಲ್ ಹೇಳಿಕೆ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡಿದೆ. ‘ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ನೋಡುವ ರೀತಿ ಇದೇನಾ? ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧದ ಇಂತಹ ಹೇಳಿಕೆಗಳನ್ನು ನಾವು ಅನುಮತಿಸುವುದಿಲ್ಲ. ಮುಂದೆ ಇಂತಹ ಹೇಳಿಕೆ ನೀಡಿದರೆ ಸ್ವಯಂಪ್ರೇರಿತರಾಗಿ ದೂರು ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಜೊತೆಗೆ ಈ ಹಿಂದೆ ಮಹಾತ್ಮಾ ಗಾಂಧೀಜಿಯವರೂ ತಮ್ಮ ಪತ್ರದಲ್ಲಿ ಯುವರ್ ಫೈಥ್ ಫುಲ್ ಸರ್ವೆಂಟ್ ಎಂದು ಬರೆದಿದ್ದರು. ಅದರ ಅರ್ಥ ಅವರು ಬ್ರಿಟಿಷರ ಸೇವಕರೆಂದೇ?’ ಎಂದು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahargram, ಹಿಂದೂ ಮುಸ್ಲಿಂ ಮಧ್ಯೆ ಬೆಂಕಿ ಹಚ್ಚುವ ಮುನ್ನ ಬಿಜೆಪಿ ಇದಕ್ಕೆ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು

ಪಾಕಿಸ್ತಾನಿಯರನ್ನು ಗುರುತಿಸಿ, ಅವರ ದೇಶಕ್ಕೇ ಕಳುಹಿಸಿ: ಎಲ್ಲಾ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಆದೇಶ

ಭಾರತೀಯ ಸೇನೆಯನ್ನು ಪ್ರಶ್ನಿಸುವವರ ಈ Videoವನ್ನು ನೋಡಲೇ ಬೇಕು, ಮೆಚ್ಚಲೇ ಬೇಕು

ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ

CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

ಮುಂದಿನ ಸುದ್ದಿ
Show comments