Webdunia - Bharat's app for daily news and videos

Install App

ಮಣಿಪುರದಲ್ಲಿ ಸಶಸ್ತ್ರಪಡೆಗಳಿಂದ ನಕಲಿ ಎನ್ ಕೌಂಟರ್: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Webdunia
ಶುಕ್ರವಾರ, 14 ಜುಲೈ 2017 (14:28 IST)
ನವದೆಹಲಿ:ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದೆ ಎನ್ನಲಾದ ನಕಲಿ ಎನ್ ಕೌಂಟರ್ ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
 
ಮಣಿಪುರದಲ್ಲಿ 2000ದಿಂದ 2012ರವರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರಿಂದ 1,528 ಮಂದಿ ಕೈದಿಗಳ ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ಪರಿಹಾರ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ಬಿ.ಲೋಕೂರ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಸಿಬಿಐ ನಿರ್ದೇಶಕರಿಗೆ ಆದೇಶ ನೀಡಿ, ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಅಧಿಕಾರಿಗಳ ತಂಡವೊಂದನ್ನು ರಚಿಸುವಂತೆ ಸೂಚಿಸಿದೆ. 
 
ಸೇನಾಪಡೆಗಳ ನಕಲಿ ಎನ್ ಕೌಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಮಣಿಪುರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡಿದೆ. 2018ರ ಜನವರಿಯಲ್ಲಿ ಸಿಬಿಐ ತನ್ನ ವರದಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಲಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments