ಪ್ಯಾನ್ ಕಾರ್ಡ್`ಗೆ ಆಧಾರ್ ಕಡ್ಡಾಯವೇಕೆ..?: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

Webdunia
ಶುಕ್ರವಾರ, 21 ಏಪ್ರಿಲ್ 2017 (21:33 IST)
ಪ್ಯಾನ್ ಕಾರ್ಡ್ ಪಡೆಯಲು, ಇನ್ ಕಂ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್ ವೇಳೆ ಆಧಾರ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರವನ್ನ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಆಧಾರ್ ಕಡ್ಡಾಯ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಕಿ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಆಧಾರ್ ಕೇವಲ ಅರ್ಜಿದಾರರ ಆಯ್ಕೆಯಾಗಿರಬೇಕೆಂದು ಹಿಂದಿನ ಆದೇಶದಲ್ಲಿ ತಿಳಿಸಿದ್ದರೂ ಪ್ಯಾನ್ ಕಾರ್ಡ್`ಗೆ ಆಧಾರ್ ಕಡ್ಡಾಯಗೊಳಿಸಿದ್ದೇಕೆ ಎಂದು ಸುಪ್ರೀಂಕೋರ್ಟ್ ಕಟುವಾಗಿ ಪ್ರಶ್ನಿಸಿದೆ.

ಈ ಕುರಿತು, ಕೇಂದ್ರದ ಪರವಾಗಿ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್, ಹಣದ ವರ್ಗಾವಣೆಯಲ್ಲಿ  ಪ್ಯಾನ್ ಕಾರ್ಡ್ ದುರ್ಬಳಕೆಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು.  ಅದನ್ನ ತಡೆಯಲು ಆಧಾರ್ ಕಡ್ಡಾಯಹೊಳಿಸುವುದೊಂದೇ ಮಾರ್ಗವಾಗಿತ್ತು ಎಂದಿದ್ದಾರೆ. ಕಳೆದ ತಿಂಗಳಷ್ಟೇ ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಲಿಂಕ್ ಕಡ್ಡಾಯ ಎಂದು ಕೇಂದ್ರ ಆದೇಶಿಸಿತ್ತು.

ಕಳೆದ ತಿಂಗಳಷ್ಟೇ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಬ್ಯಾಂಕ್ ಖಾತೆ, ಪಾಸ್ ಪೋರ್ಟ್, ಮೊಬೈಲ್ ಸಂಪರ್ಕಕ್ಕೆ ಆಧಾರ್ ಕಡ್ಡಾಯವನ್ನ ಎತ್ತಿಹಿಡಿದಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments