Webdunia - Bharat's app for daily news and videos

Install App

ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ನಕಾರ

Webdunia
ಸೋಮವಾರ, 24 ಜುಲೈ 2017 (14:43 IST)
ನವದೆಹಲಿ:1989-90 ರ ಅವಧಿಯಲ್ಲಿ ಕಾಶ್ಮೀರದಲ್ಲಿ ನಡೆದ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದ ಮರು ತನಿಖೆ ನಡೆಸಿ, ಪ್ರತ್ಯೇಕತಾವಾದಿ ಮುಖಂಡ ಯಾಸಿನ್ ಮಲಿಕ್ ಸೇರಿದಂತೆ ಹಲವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
 
ಘಟನೆ ನಡೆದು ಸುಮಾರು 27 ವರ್ಷಗಳು ಕಳೆದಿದೆ. ಆ ನಿಟ್ಟಿನಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ಲೂಟಿ, ಬೆಂಕಿ ಹಚ್ಚಿದ ಪ್ರಕರಣದ ಕುರಿತು ಸಾಕ್ಷ್ಯಾಧಾರವನ್ನು ಸಂಗ್ರಹಿಸುವುದು ತುಂಬಾ ಕಷ್ಟದ ಕೆಲಸ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ಜಸ್ಟೀಸ್ ಡಿವೈ ಚಂದ್ರಾಚೂಡ್ ನೇತೃತ್ವದ ಪೀಠ, 27 ವರ್ಷಗಳ (ಅರ್ಜಿದಾರರು) ಕಳೆದ ಮೇಲೆ ಅರ್ಜಿ ಸಲ್ಲಿಸಿದ್ದೀರಿ, ಈಗ ಸಾಕ್ಷ್ಯ ಎಲ್ಲಿಂದ ಬರಲು ಸಾಧ್ಯ ಎಂದು ಪ್ರಶ್ನಿಸಿದೆ.
 
ರೂಟ್ಸ್ ಆಫ್ ಕಾಶ್ಮೀರ್ ಸಂಘಟನೆಯ ಪರ ವಕೀಲ ವಿಕಾಸ್ ಪಡೋರಾ  ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments