ಪದ್ಮನಾಭಸ್ವಾಮಿ ದೇಗುಲದ ಮನವಿ ತಿರಸ್ಕರಿಸಿದ 'ಸುಪ್ರೀಂ'

Webdunia
ಬುಧವಾರ, 22 ಸೆಪ್ಟಂಬರ್ 2021 (12:41 IST)
ನವದೆಹಲಿ : ದೇಗುಲಕ್ಕೆ ಸಂಬಂಧಿಸಿ ಕಳೆದ 25 ವರ್ಷಗಳ ಲೆಕ್ಕಪರಿಶೋಧನೆ ನಡೆಸುವುದರಿಂದ ವಿನಾಯಿತಿ ನೀಡಬೇಕು ಎಂಬ ತಿರುವನಂತಪುರದ ಪದ್ಮನಾಭಸ್ವಾಮಿ ದೇವಸ್ಥಾನದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿತು.

'ಲೆಕ್ಕಪರಿಶೋಧನೆ ಕಾರ್ಯವನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು' ಎಂದು ಸುಪ್ರೀಂಕೋರ್ಟ್ ಸೂಚಿಸಿತು. ದೇವಸ್ಥಾನದ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಹಾಗೂ ಬೇಲಾ ಎಂ.ತ್ರಿವೇದಿ ಅವರಿರುವ ನ್ಯಾಯಪೀಠ ನಡೆಸಿತು.
'ಲೆಕ್ಕಪರಿಶೋಧನೆ ಕೇವಲ ದೇವಸ್ಥಾನಕ್ಕೆ ಸಂಬಂಧಿಸಿದ್ದಲ್ಲ. ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದ ಟ್ರಸ್ಟ್ಗೂ ಇದು ಸಂಬಂಧಿಸಿದ್ದು. 2015ರಲ್ಲಿ ಅಮಿಕಸ್ ಕ್ಯೂರಿ ಅವರು ಸಲ್ಲಿಸಿದ್ದ ವರದಿಯ ಆಧಾರದ ಮೇಲೆ ಲೆಕ್ಕಪರಿಶೋಧನೆ ನಡೆಸಲು ಆದೇಶಿಸಲಾಗಿದೆ' ಎಂದು ನ್ಯಾಯಪೀಠ ಹೇಳಿತು.
ಕೋವಿಡ್ ಪಿಡುಗು ಹಾಗೂ ಲಾಕ್ಡೌನ್ನಿಂದಾಗಿ ದೇವಸ್ಥಾನದ ಆದಾಯ ಕುಸಿದಿದೆ. ದೇವಸ್ಥಾನ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ನಿತ್ಯದ ವೆಚ್ಚ ಸರಿದೂಗಿಸಲು ಸಹ ಆಗುತ್ತಿಲ್ಲ ಎಂದು ದೇವಸ್ಥಾನ ಆಡಳಿತ ಸಮಿತಿ ಸೆ.17ರಂದು ಸುಪ್ರೀಂಕೋರ್ಟ್ಗೆ ತಿಳಿಸಿತ್ತು.
ಈ ಕಾರಣಕ್ಕೆ, ತಿರುವಾಂಕೂರು ರಾಜ ಮನೆತನ ಮುನ್ನಡೆಸುತ್ತಿರುವ ದೇವಸ್ಥಾನಕ್ಕೆ ಸಂಬಂಧಿಸಿದ ಟ್ರಸ್ಟ್ನ ಲೆಕ್ಕಪರಿಶೋಧನೆ ನಡೆಸಲು ಸೂಚಿಸುವಂತೆಯೂ ಕೋರಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments