Webdunia - Bharat's app for daily news and videos

Install App

ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂಗಳ ಪ್ರಾರ್ಥನೆಗೆ ಸುಪ್ರೀಂ ನಕಾರ

Krishnaveni K
ಸೋಮವಾರ, 1 ಏಪ್ರಿಲ್ 2024 (16:22 IST)
ನವದೆಹಲಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಹಿಂದೂಗಳ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮತ್ತೊಮ್ಮೆ ಹಿಂದೂಗಳಿಗೆ ಮೇಲುಗೈಯಾಗಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಮಸೀದಿ ಆವರಣದೊಳಗೆ ಹಿಂದೂಗಳ ಧಾರ್ಮಿಕ ಆಚರಣೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿ ಎಂದಿದೆ.

‘ಜನವರಿ 17 ಮತ್ತು ಜನವರಿ 31 ರ ಆದೇಶದ ನಂತರ ಮುಸ್ಲಿಂ ಸಮುದಾಯದಿಂದ ನಮಾಜ್ ಮತ್ತು ಹಿಂದೂಗಳ ಪೂಜೆಯನ್ನು ತೆಹ್ಖಾನ ಪ್ರದೇಶಕ್ಕೆ ಸೀಮಿತಗೊಳಿಸಲಾಗಿದೆ. ಈ ಅಂಶಕ್ಕೆ ಅನುಗುಣವಾಗಿ ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತ ಎಂದು ಸುಪ್ರೀಂ ಹೇಳಿದೆ.

ಹಿಂದೂಗಳ ಪೂಜೆಗೆ ಅವಕಾಶ ನೀಡಿದ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಮಸೀದಿ ಸಮಿತಿಯ ಮನವಿಗೆ ಏಪ್ರಿಲ್ 30 ರೊಳಗಾಗಿ ಹಿಂದೂ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರ ಪ್ರತಿಕ್ರಿಯೆಯನ್ನು ಕೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments