Webdunia - Bharat's app for daily news and videos

Install App

ತ್ರಿವಳಿ ತಲಾಖ್ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

Webdunia
ಗುರುವಾರ, 18 ಮೇ 2017 (21:36 IST)
ತಲಾಖ್ ಸಾಂವಿಧಾನಿಕ ಮಾನ್ಯತೆ ಕುರಿತ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸಂವಿಧಾನ ಪೀಠ ಮುಕ್ತಾಯಗೊಳಿಸಿದ್ದು, ತೀರ್ಪನ್ನ ಕಾಯ್ದಿರಿಸಿದೆ.

ತಲಾಖ್, ನಿಖಾ ಹಲಾಲ್, ಬಹುಪತ್ನಿತ್ವ ಕುರಿತಾದ ಅರ್ಜಿಗಳು ಸುಪ್ರೀಂಕೋರ್ಟ್ ಮುಂದೆ ಬಂದಿದ್ದವು. ಬೇಸಿಗೆ ರಜಾ ಅವಧಿಯಲ್ಲಿ ಮುಖ್ಯ ನ್ಯಾಯಮೂರ್ತೀ ಖೇಹರ್ ನೇತೃತ್ವದಲ್ಲಿ ಐವರು ವಿವಿಧ ಧರ್ಮಗಳ ನ್ಯಾಯಾಧೀಶರನ್ನೊಳಗೊಂಡ ಪಂಚ ಪೀಠ ವಿಚಾರಣೆ ನಡೆಸಿದೆ.

ಅಂತಿಮ ವಾದ-ವಿವಾದದ ವೇಳೆ ಅಖಿಲ ಭಾರತ  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯೂ, ತ್ರಿವಳಿ ತಲಾಖ್ ಅನ್ನ ಸಮರ್ಥನೆ ಮಾಡಿಕೊಂಡಿದ್ದು, ತಲಾಖ್ ವೇಳೆ ಮಹಿಳೆಯರ ವಾದವನ್ನೂ ಪರಿಗಣಿಸುವಂತೆ  ಖಾಸಿಗಳಿಗೆ ಸಲಹೆ ಮತ್ತು
ಸೂಚನೆಗಳ ಜಾರಿಗೆ ಸಿದ್ಧವಿರುವುದಾಗಿ ಹೇಳಿದೆ. ಈ ಸಂದರ್ಭ ಸುಪ್ರೀಂಕೋರ್ಟ್, ತಲಾಖ್ ತಿರಸ್ಕರಿಸುವ ಅಧಿಕಾರ ಪತ್ನಿಗಿದೆಯೇ ಮತ್ತು ತ್ರಿವಳಿ ತಲಾಖ್ ಬಗ್ಗೆ ಖುರಾನಿನಲ್ಲಿ ಉಲ್ಲೇಖವಿದೆಯೇ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯನ್ನ ಪ್ರಶ್ನಿಸಿದೆ.

ಬುಧವಾರ ಕೇಂದ್ರ ಸರ್ಕಾರ ಸಹ ತ್ರಿವಳಿ ತಲಾಖ್ ನಿಷೇಧಿಸುವಂತೆ ಸುಪ್ರೀಂಕೋರ್ಟ್`ಗೆ ಮನವಿ ಸಲ್ಲಿಸಿತ್ತು. 25 ರಾಷ್ಟ್ರಗಳಲ್ಲಿ ನಿಷೇಧಗೊಂಡಿರುವ ತಲಾಖ್ ಕಡ್ಡಾಯವೆಂದು ಹೇಳಲಾಗದು ಎಂದು ಅಟಾರ್ನಿ ಜನರಲ್ ವಾದಿಸಿದ್ದರು. ಜುಲೈನಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments