Webdunia - Bharat's app for daily news and videos

Install App

ಫ್ರೀ ಅಂತ ಕೊಟ್ಟು ಜನ ಕೆಲಸ ಮಾಡೋದನ್ನೇ ಮರೆತಿದ್ದಾರೆ: ಸುಪ್ರೀಂ ಕೋರ್ಟ್ ಚಾಟಿ

Krishnaveni K
ಬುಧವಾರ, 12 ಫೆಬ್ರವರಿ 2025 (15:09 IST)
ನವದೆಹಲಿ: ಚುನಾವಣೆ ಬರುತ್ತಿದ್ದಂತೇ ರಾಜಕೀಯ ಪಕ್ಷಗಳು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿರುವುದರಿಂದ ಜನ ಕೆಲಸ ಮಾಡುವುದನ್ನೇ ಮರೆತಿದ್ದಾರೆ ಎಂದು ಸುಪ್ರೀಂಕೋರ್ಟ್ ಇಂದು ಚಾಟಿ ಬೀಸಿದೆ.

ಜಸ್ಟಿಸ್ ಬಿಆರ್ ಗವಾಯಿ ಮತ್ತು ಜಸ್ಟಿಸ್ ಅಗಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂಥಹ ಯೋಜನೆಗಳು ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದಿದ್ದಾರೆ.

ಹೇಗಿದ್ದರೂ ಉಚಿತ ರೇಷನ್, ಹಣ ಸಿಗುತ್ತಿದೆ. ಹೀಗಿರುವಾಗ ಕೆಲಸ ಯಾಕೆ ಮಾಡಬೇಕು ಎಂಬ ಮನೋಭಾವನೆಯನ್ನು ಜನರು ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಉಚಿತ ಯೋಜನೆಗಳು ಅಪಾಯಕಾರಿ ಎಂದಿದ್ದಾರೆ. ನಗರ ಪ್ರದೇಶಗಳಲ್ಲಿ ಜನರಿಗೆ ಸ್ವಂತ ಸೂರು ನೀಡುವ ಕುರಿತಾದ ಮನವಿಯೊಂದರ ವಿಚಾರಣೆ ವೇಳೆ ಸುಪ್ರೀಂ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ಕಾಳಜಿಯನ್ನು ನಾವು ಅಭಿನಂದಿಸುತ್ತೇವೆ. ಆದರೆ ಇದರಿಂದ ದೇಶದ ಅಭಿವೃದ್ಧಿಗೆ ಅವರು ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments