Webdunia - Bharat's app for daily news and videos

Install App

ಬುಲ್ಡೋಜರ್ ನಿಂದ ಆಪರಾಧಿಗಳ ಮನೆ ಧ್ವಂಸಕ್ಕೆ ಸುಪ್ರೀಂಕೋರ್ಟ್ ಬ್ರೇಕ್

Krishnaveni K
ಸೋಮವಾರ, 2 ಸೆಪ್ಟಂಬರ್ 2024 (15:39 IST)
ನವದೆಹಲಿ: ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳಲ್ಲಿ ಅಪರಾಧಿಗಳಿಗೆ ಸಂಬಂಧಪಟ್ಟ ಕಟ್ಟಡದ ಮೇಲೆ ಬುಲ್ಡೋಜರ್ ಹರಿಸಿ ಧ್ವಂಸ ಮಾಡುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಆರೋಪಿ ಎಂದು ಮಾತ್ರವಲ್ಲ, ಅಪರಾಧಿ ಎಂದೇ ಕೋರ್ಟ್ ನಲ್ಲಿ ಸಾಬೀತಾದರೂ ಅಂತಹವರಿಗೆ ಸೇರಿದ ಕಟ್ಟಡಗಳ ಮೇಲೆ ಬುಲ್ಡೋಜರ್ ಹರಿಸಿ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಆ ಮೂಲಕ ಬುಲ್ಡೋಜರ್ ನ್ಯಾಯದ ವಿರುದ್ಧ ಅಸಮಾಧಾನ ಹೊರಹಾಕಿದೆ.

ಅಪರಾಧಿ ಎಂದು ಸಾಬೀತಾದರೂ ಅಂತಹವರ ಮನೆಗಳನ್ನು ಧ್ವಂಸ ಮಾಡಲು ಸಾಧ್ಯವಿಲ್ಲ. ಅಧಿಕಾರಿಗಳು ಇದನ್ನು ಹೇಗೆ ಮಾಡುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ. ಅಪರಾಧಿಗಳ ಮನೆ ಧ್ವಂಸ ಮಾಡುವ ಪ್ರಕ್ರಿಯೆ ವಿರುದ್ಧ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ, ಮಗ ದಂಗೆಕೋರನೇ ಇರಬಹುದು. ಆದರೆ ಹಾಗಂತ ಆತನ ಮನೆ ಧ್ವಂಸ ಮಾಡಿದರೆ ಆತನ ತಂದೆ-ತಾಯಿ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನೆ ಮಾಡಿದೆ. ಅನಧಿಕೃತ ಕಟ್ಟಡಗಳಾಗಿದ್ದರೆ ಅದನ್ನು ಸಮರ್ಥಿಸಬಹುದು. ಆದರೆ ಅಪರಾಧಿಗಳ ಮನೆ ಕೆಡವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments