Webdunia - Bharat's app for daily news and videos

Install App

ಬುಲ್ಡೋಜರ್ ಶಿಕ್ಷೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು: ಡೀಟೈಲ್ಸ್ ಇಲ್ಲಿದೆ

Krishnaveni K
ಬುಧವಾರ, 13 ನವೆಂಬರ್ 2024 (12:14 IST)
ನವದೆಹಲಿ: ಬುಲ್ಡೋಜರ್ ಹರಿಸಿ ಕಟ್ಟಡ ಧ್ವಂಸಗೊಳಿಸುವ ಕಾರ್ಯಾಚರಣೆ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರೋಪಿಯಾಗಿರುವ ಅಥವಾ ತಪ್ಪಿತಸ್ಥರಾದವರ ಮನೆ ಅಥವಾ ಸಂಬಂಧಪಟ್ಟ ಕಟ್ಟಡವನ್ನು ಅಧಿಕಾರಿಗಳೇ ಬುಲ್ಡೋಜರ್ ಹರಿಸಿ ನೆಲಸಮಗೊಳಿಸಿ ಶಾಸ್ತಿ ಮಾಡಲಾಗುತ್ತಿತ್ತು. ಆದರೆ ಈ ಬಗ್ಗೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.

ಯಾವುದೇ ಕಟ್ಟಡ ಅಥವಾ ಮನೆ ಧ್ವಂಸಗೊಳಿಸುವ ಮೊದಲು ಮಾಲಿಕರಿಗೆ ಮುಂಚಿತವಾಗಿ 15 ದಿನಗಳ ನೋಟಿಸ್ ನೀಡಬೇಕು. ಆರೋಪಿಯಾಗಿರುವುದು ಅಥವಾ ತಪ್ಪಿತಸ್ಥರಾಗಿರುವುದು ಅವರಿಗೆ ಸಂಬಂಧಪಟ್ಟ ಕಟ್ಟಡಗಳನ್ನು ಧ್ವಂಸಗೊಳಿಸಲು ನೀಡುವ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಅಪರಾಧಕ್ಕೆ ಶಿಕ್ಷೆ ನೀಡಲು ನ್ಯಾಯಾಲವಿದೆ. ಆದರೆ ಅವರಿಗೆ ಸಂಬಂಧಿಸಿದ ಕಟ್ಟಡಗಳನ್ನು ನಿರಂಕುಶವಾಗಿ ಅಧಿಕಾರಿಗಳು ಧ್ವಂಸ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿ ಎಂಬ ಮಾತ್ರಕ್ಕೆ ಕಟ್ಟಡ ಕೆಡವಿದರೆ ಅಪರಾಧವಾಗುತ್ತದೆ. ಮನೆ ಅಥವಾ ಕಟ್ಟಡ ಕೆಡವಿದರೆ ಪರಿಹಾರ ನೀಡಬೇಕು. ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕುಟುಂಬಕ್ಕೆ ಶಿಕ್ಷೆ ಕೊಡುವುದು ನ್ಯಾಯಸಮ್ಮತವಲ್ಲ. ನಿಯಮಬಾಹಿರವಾಗಿದ್ದರೆ ನೋಟಿಸ್ ನೀಡಬೇಕು. ಅಂಚೆ ಮೂಲಕ ನೋಟಿಸ್ ತಲುಪಬೇಕು. ನೋಟಿಸ್ ನೀಡಿ 15 ದಿನ ಕಾದ ಬಳಿಕ ಕ್ರಮ ಕೈಗೊಳ್ಳಬೇಕು. ನೋಟಿಸ್ ನೀಡಿದ್ದರೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ ಕಟ್ಟಡವಾಗಿದ್ದರೆ ತೆರವುಗೊಳಿಸಲು ಆರೋಪಿಗಳಿಗೆ ಸಮಯ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments