ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Krishnaveni K
ಗುರುವಾರ, 20 ನವೆಂಬರ್ 2025 (12:56 IST)
ನವದೆಹಲಿ: ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಸಮಯ ನಿಗದಿಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸಂವಿಧಾನದ 13 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 13 ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಗೆ ಕೇಳಿದ್ದರು.

ಕಳೆದ ಏಪ್ರಿಲ್ ನಲ್ಲಿ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ರವಿ ನಡುವಿನ ಪ್ರಕಠಣದಲ್ಲಿ ಸುಪ್ರೀಂಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳ ಪೀಠವು, ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವುದಕ್ಕೆ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಗಡುವನ್ನು ನಿಗದಿಪಡಿಸಿತ್ತು.

ಇದನ್ನು ಪ್ರಶ್ನಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸುಪ್ರೀಂಕೋರ್ಟ್ ಗೆ 13 ಪ್ರಶ್ನೆಗಳನ್ನು ಕೇಳಿದ್ದರು. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸಬಹುದೇ ಎಂದು ಕೇಳಿದ್ದರು. ಇದಕ್ಕೀಗ ಮುಖ್ಯ ನ್ಯಾಯಮೂರ್ತಿಗಳ ಪೀಠ ಮೇಲಿನಂತೆ ತೀರ್ಪು ನೀಡಿದೆ. ಈ ತೀರ್ಪು ಈಗ ರಾಜ್ಯಪಾಲರನ್ನು ಧಿಕ್ಕರಿಸಿ ಮಸೂದೆಗಳನ್ನು ಅಂಗೀಕರಿಸುವ ರಾಜ್ಯಗಳಿಗೆ ಉತ್ತರ ಕೊಟ್ಟಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments