ಎಫ್ಐಆರ್ ಗಳಿಂದ ʼದಿ ವೈರ್ʼ ಪತ್ರಕರ್ತರಿಗೆ ಎರಡು ತಿಂಗಳು ರಕ್ಷಣೆಯೊದಗಿಸಿದ ಸುಪ್ರೀಂ

Webdunia
ಬುಧವಾರ, 8 ಸೆಪ್ಟಂಬರ್ 2021 (15:10 IST)
ಹೊಸದಿಲ್ಲಿ: ದಿ ವೈರ್ ಡಿಜಿಟಲ್ ಸುದ್ದಿ ತಾಣ ಪ್ರಕಟಿಸಿದ್ದ ಕೆಲ ಸುದ್ದಿಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಮೂರು ಎಫ್ಐಆರ್ಗಳಿಂದ ಸಂಸ್ಥೆಯ ಮೂವರು ವರದಿಗಾರರಿಗೆ ಸುಪ್ರೀಂ ಕೋರ್ಟ್ ಎರಡು ತಿಂಗಳು ರಕ್ಷಣೆಯೊದಗಿಸಿದೆ.

ಈ ಪ್ರಕರಣವನ್ನು ವಿಚಾರಣೆಯನ್ನು ನೇರವಾಗಿ ಕೈಗೆತ್ತಿಕೊಳ್ಳುವುದರಿಂದ ಅದು ʼಪೆಂಡೋರಾಸ್ ಬಾಕ್ಸ್ʼ ತೆರೆದಂತಾಗಬಹುದು ಎಂದು ಹೇಳಿದ ನ್ಯಾಯಾಲಯ, ಅರ್ಜಿದಾರರು ಎಫ್ಐಆರ್ಗಳ ರದ್ದತಿ ಕೋರಿ ಹೈಕೋರ್ಟ್ ಕದ ತಟ್ಟಬಹುದು ಎಂದು ಹೇಳಿದೆ.
"ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಬಾರದು ಎಂದು ನಮಗೆ ತಿಳಿದಿದೆ" ಎಂದು ಹೇಳಿದ ನ್ಯಾಯಾಲಯ ಅದೇ ಸಮಯ ಪತ್ರಕರ್ತರು ನೇರವಾಗಿ ಸುಪ್ರೀಂ ಕೋರ್ಟಿಗೆ ಬರುವ ಬದಲು ಮೊದಲು ಹೈಕೋರ್ಟಿಗೆ ತೆರಳಬೇಕಿತ್ತು ಎಂದಿದೆ.
ದಿ ವೈರ್ ಸುದ್ದಿ ತಾಣದ ಒಡೆತನ ಹೊಂದಿರುವ ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ ಮತ್ತು ಅದರ ಪತ್ರಕರ್ತರಾದ ಸೇರಜ್ ಆಲಿ, ಮುಕುಲ್ ಸಿಂಗ್ ಚೌಹಾಣ್ ಮತ್ತು ಇಸ್ಮತ್ ಅರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಬಿ ಆರ್ ಗವಾಯಿ ಹಾಗೂ ಬಿ.ವಿ ನಾಗರತ್ನ ಅವರ ಪೀಠ ವಿಚಾರಣೆ ನಡೆಸಿದೆ. ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿರುವ ಅರ್ಜಿಯನ್ನು ವಾಪಸ್ ಪಡೆಯುವ ಅವಕಾಶವನ್ನೂ ಅರ್ಜಿದಾರರಿಗೆ ನೀಡಲಾಗಿದೆ.
ಗಣತಂತ್ರ ದಿನದಂದು ರೈತ ಹೋರಾಟಗಾರನೊಬ್ಬನ ಸಾವು, ಗಾಝಿಯಾಬಾದ್ನಲ್ಲಿ ಮುಸ್ಲಿಂ ವೃದ್ಧನೊಬ್ಬನ ಮೇಲೆ ಹಲ್ಲೆ ಹಾಗೂ ಬಾರಾಬಂಕಿಯಲ್ಲಿ ಮಸೀದಿ ನೆಲಸಮ ಕುರಿತಾದ ವರದಿಗಳಿಗೆ ಸಂಬಂಧಿಸಿದಂತೆ ದಿ ವೈರ್ ವಿರುದ್ಧ ಎಫ್ಐಆರ್ ಗಳು ದಾಖಲಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments